Select Your Language

Notifications

webdunia
webdunia
webdunia
webdunia

ರಾಜ್ಯ ಸಂಪುಟ ವಿಸ್ತರಣೆಗೆ ಪಿತೃಪಕ್ಷದ ಕಾಟ!

ರಾಜ್ಯ ಸಂಪುಟ ವಿಸ್ತರಣೆಗೆ ಪಿತೃಪಕ್ಷದ ಕಾಟ!
ಬೆಂಗಳೂರು , ಶುಕ್ರವಾರ, 14 ಸೆಪ್ಟಂಬರ್ 2018 (10:17 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರು ಎದುರು ನೋಡುತ್ತಿದ್ದರೆ, ಪಿತೃಪಕ್ಷದ ಕಾಟ ಶುರುವಾಗಿದೆ!

ಸೆಪ್ಟೆಂಬರ್ ಮೊದಲ ವಾರದಲ್ಲೇ ಸಂಪುಟ ವಿಸ್ತರಣೆ ನಡೆಸುವುದೆಂದು ಈ ಮೊದಲು ಕಾಂಗ್ರೆಸ್ ಮತ್ತು ಜೆಡಿಎಸ್ ನಿರ್ಧಾರ ಮಾಡಿಕೊಂಡಿದ್ದರು. ಆದರೆ ಇದೀಗ ಜಾರಕಿಹೊಳಿ ಸಹೋದರರ ಬಂಡಾಯದ ನಂತರ ದಿಡೀರ್ ಆಗಿ ಸಂಪುಟ ವಿಸ್ತರಣೆ ಮಾಡಿದರೆ ಬಂಡಾಯ ಬಿಸಿ ಹೆಚ್ಚಾಗಬಹುದು ಎಂಬ ಭಯ ಉಭಯ ಪಕ್ಷಗಳ ಹೈಕಮಾಂಡ್ ಗಿದೆ.

ಹೀಗಾಗಿ ಸಂಪುಟ ವಿಸ್ತರಣೆ ಮುಂದೂಡಲು ನಾಯಕರು ಚಿಂತನೆ ನಡೆಸುತ್ತಿದ್ದಾರೆ. ಆದರೆ ತಡವಾದರೆ ಪಿತೃಪಕ್ಷ ಶುರುವಾಗುತ್ತದೆ. ಪಿತೃಪಕ್ಷದಲ್ಲಿ ಸಂಪುಟ ವಿಸ್ತರಣೆ ಮಾಡಲು ಜೆಡಿಎಸ್ ವರಿಷ್ಠ ದೇವೇಗೌಡರು ಒಪ್ಪಲಾರರು. ಈ ಕಾರಣಕ್ಕೆ ಈಗಲೇ ಸಂಪುಟ ವಿಸ್ತರಣೆ ನಡೆಯಲಿ ಎಂದು ಕೆಲವು ಕಾಂಗ್ರೆಸ್ ನಾಯಕರು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಇದೀಗ ಹೈಕಮಾಂಡ್ ಗೆ ಹೊಸ ತಲೆನೋವು ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಬಂಡಾಯದ ಬಿಸಿ ನಡುವೆಯೇ ಡಿಕೆಶಿ-ಪರಮೇಶ್ವರ್ ದಿಡೀರ್ ಭೇಟಿ