Select Your Language

Notifications

webdunia
webdunia
webdunia
webdunia

ಶೀಘ್ರವೇ ಸಂಪುಟ ವಿಸ್ತರಣೆ : ಸಿಎಂ

ಶೀಘ್ರವೇ ಸಂಪುಟ ವಿಸ್ತರಣೆ : ಸಿಎಂ
ಚಿತ್ರದುರ್ಗ , ಸೋಮವಾರ, 9 ಜನವರಿ 2023 (10:52 IST)
ಚಿತ್ರದುರ್ಗ : ಶೀಘ್ರವೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಕೆ.ಎಸ್ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಶನಿವಾರ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಲ್ಲಿನ ಸೀಬಾರ ಬಳಿಯ ಮೇದಾರ ಗುರುಪೀಠಕ್ಕೆ ಭೇಟಿ ನೀಡಿದರು. ನಂತರ ಮೇದಾರರ ಬುಡಕಟ್ಟು ಸಮಾವೇಶದಲ್ಲಿ ಪಾಲ್ಗೊಂಡು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 

ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಕೇಂದ್ರ ನಾಯಕರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಿ ಬಸ್ಗಳಿಂದ ಬಿಎಂಟಿಸಿಗೆ ಕೋಟಿ ಕೋಟಿ ಆದಾಯ