ದಸರಾ ಮಹೋತ್ಸವಕ್ಕೆ ದಿನಗಣನೆ; ಅರಮನೆ ಪ್ರವೇಶ ದರ ಏರಿಕೆ ಶಾಕ್!

Webdunia
ಶನಿವಾರ, 25 ಸೆಪ್ಟಂಬರ್ 2021 (12:12 IST)
ಮೈಸೂರು, ಸೆ 25 : ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆಯಲ್ಲಿ ಪಾರಂಪರಿಕ ದಸರಾ ಸಡಗರ ಸಂಭ್ರಮ ಮನೆ ಮಾಡಿದೆ. ಅರಮನೆಯ ಸಾಂಪ್ರದಾಯಿಕ ಕಾರ್ಯಕ್ರಮಗಳನ್ನು ನಿಗದಿ ಮಾಡಲಾಗಿದ್ದು, ಅರಮನೆ ಕಾರ್ಯಕ್ರಮಗಳ ಪಟ್ಟಿ ಲಭ್ಯವಾಗಿದೆ.

ಕೊರೊನಾ ಸೋಂಕು ಹಿನ್ನೆಲೆ ಈ ಬಾರಿಯೂ ಪಾರಂಪರಿಕ ಜಟ್ಟಿ ಕಾಳಗ ರದ್ದುಗೊಳಿಸಲಾಗಿದೆ. ಕಳೆದ ಬಾರಿಯೂ ಜಟ್ಟಿ ಕಾಳಗವನ್ನು ರದ್ದುಗೊಳಿಸಲಾಗಿತ್ತು. ಅರಮನೆಯಲ್ಲಿ ಅಕ್ಟೋಬರ್ 1ಕ್ಕೆ ರತ್ನ ಖಚಿತ ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅಕ್ಟೋಬರ್ 1ರಂದು ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಪ್ರವಾಸಿಗರಿಗೆ ಬೆಲೆ ಏರಿಕೆ ಶಾಕ್
ದಸರಾಗೂ ಮುನ್ನ ಪ್ರವಾಸಿಗರಿಗೆ ಟಿಕೆಟ್ ದರ ಏರಿಕೆ ಶಾಕ್ ನೀಡಲಾಗಿದೆ. ಅರಮನೆ ಪ್ರವೇಶ ದರ ಏರಿಕೆ ಮಾಡಲಾಗಿದ್ದು, ವಯಸ್ಕರಿಗೆ 100 ರೂ., ಮಕ್ಕಳಿಗೆ 50 ರೂ. ನಿಗದಿ ಮಾಡಲಾಗಿದೆ. ಅಗತ್ಯ ವಸ್ತುಗಳ ದರಗಳ ಏರಿಕೆ ಬೆನ್ನಲ್ಲೇ ಅರಮನೆ ಪ್ರವೇಶ ದರ ಏರಿಕೆ ಮಾಡಲು ತೀರ್ಮಾನಿಸಿದ್ದು,
ಇಂದಿನಿಂದಲೇ ದರ ಏರಿಕೆಗೆ ಅರಮನೆ ಮಂಡಳಿ ಆದೇಶ ನೀಡಿದೆ. ಇನ್ನು ಶಾಲಾ ಮಕ್ಕಳಿಗೆ ಹಳೆಯ ದರ 20 ರೂ. ಹೊಸ ದರ 50 ರೂ. ಏರಿಕೆ ಮಾಡಲಾಗಿದೆ. ಆದರೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಬೆಲೆ ಏರಿಕೆ ಮಾಡಿಲ್ಲ.
ಅ.7ರಿಂದ 14ರವರೆಗೂ ಅರಮನೆಯಲ್ಲಿ ದಸರಾ ಕಾರ್ಯಕ್ರಮ ನಡೆಯಲಿದ್ದು, ಅಕ್ಟೋಬರ್ 7ರಿಂದ ಅಕ್ಟೋಬರ್ 15ರವರೆಗೆ ಅರಮನೆಗೆ ಮಧ್ಯಾಹ್ನ 2.30ರವರೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments