Webdunia - Bharat's app for daily news and videos

Install App

ಲೈಂಗಿಕ ಕ್ರಿಯೆಯಿಂದ ಹರಡುತ್ತೆ ಮಂಕಿಪಾಕ್ಸ್‌ ಸೋಂಕು!?

Webdunia
ಮಂಗಳವಾರ, 26 ಜುಲೈ 2022 (16:24 IST)
ನವದೆಹಲಿ : ಮಂಕಿಪಾಕ್ಸ್ ಸೋಂಕು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದ ನಂತರ, ಸೋಂಕಿಗೆ ಸಂಬಂಧಿಸಿದಂತೆ ತಜ್ಞ ವೈದ್ಯರು ಹಲವಾರು ಅಚ್ಚರಿದಾಯಕ ಅಂಶಗಳನ್ನು ಬಹಿರಂಗಪಡಿಸಿದ್ದಾರೆ.
 
ಸೋಂಕಿತರೊಂದಿಗೆ ಸಂಪರ್ಕ ಹೊಂದುವುದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಅವರಿಗೂ ಸೋಂಕು ಹರಡಲಿದೆ ಎಂದು ತಜ್ಞರು ತಿಳಿಸಿದ್ದಾರೆ.

 
ಮಂಕಿಪಾಕ್ಸ್ ಸೋಂಕು ತಗುಲಿರುವವರೊಂದಿಗೆ ಸಂಕರ್ಪ ಹೊಂದದರೆ ಅವರಿಗೂ ಸೋಂಕು ಹರಡಲಿದೆ. ಚುಂಬಿಸುವುದು, ಸ್ಪರ್ಷಿಸುವುದು, ಲೈಂಗಿಕ ಕ್ರಿಯೆಯಲ್ಲಿ ತೊಡಗಿದರೆ ಸೋಂಕು ಹರಡಲಿದೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ.

WHO ಪ್ರಕಾರ ದದ್ದುಗಳು, ದೇಹದ ದ್ರವ (ದ್ರವ, ಕೀವು ಅಥವಾ ಚರ್ಮದ ಗಾಯಗಳಿಂದ ಬರುವ ರಕ್ತ) ಮತ್ತು ಹುರುಪುಗಳು ಇತರರಿಗೂ ಸೋಂಕು ಹರಡುತ್ತವೆ. ಲಾಲಾರಸದ ಮೂಲಕ ವೈರಸ್ ಹರಡುವುದರಿಂದ ಹುಣ್ಣುಗಳು, ಗಾಯಗಳು ಸಹ ಸಾಂಕ್ರಾಮಿಕವಾಗಬಹುದು. ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿರುವ ವಸ್ತುಗಳು (ಬಟ್ಟೆ, ಹಾಸಿಗೆ, ಟವೆಲ್, ಅಡುಗೆ ಪಾತ್ರೆಗಳು) ವಸ್ತುಗಳು ಸಹ ಸೋಂಕಿನ ಮೂಲವಾಗಿರಬಹುದು.

ಸರ್ ಗಂಗಾ ರಾಮ್ ಆಸ್ಪತ್ರೆಯ ವೈದ್ಯ ಡಾ. ಧೀರೇನ್ ಗುಪ್ತಾ, ಲೈಂಗಿಕ ಸಂಪರ್ಕದ ಸಮಯದಲ್ಲಿ ಮಂಕಿಪಾಕ್ಸ್ ಹರಡುವಿಕೆ ಹೆಚ್ಚಾಗುತ್ತದೆ. ಇದು ನಿಕಟ ಸಂಪರ್ಕದ ಸಮಯದಲ್ಲಿ ಸಂಭವಿಸಬಹುದು. ತಬ್ಬಿಕೊಳ್ಳುವುದು, ಮಸಾಜ್ ಮಾಡುವುದು ಮತ್ತು ಚುಂಬಿಸುವುದು ಮತ್ತು ದೀರ್ಘಾವಧಿಯ ಮುಖಾಮುಖಿ ಸಂಪರ್ಕವು ವೈರಸ್ ಹರಡುವಿಕೆಗೆ ಕಾರಣವಾಗಬಹುದು ಎಂದು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

ಮುಂದಿನ ಸುದ್ದಿ