Webdunia - Bharat's app for daily news and videos

Install App

ವ್ಯಾಪಾರಿಗಳು ಗ್ರಾಹಕರ ಮೊಬೈಲ್ ನಂಬರ್ ಕೇಳುವಂತಿಲ್ಲ : ಕೇಂದ್ರ ಸರ್ಕಾರ

Webdunia
ಶುಕ್ರವಾರ, 26 ಮೇ 2023 (11:26 IST)
ನವದೆಹಲಿ : ಅಂಗಡಿಗಳಲ್ಲಿ ಸೇವೆಗಳನ್ನು ಒದಗಿಸುವ ಸಲುವಾಗಿ ಗ್ರಾಹಕರ ವೈಯಕ್ತಿಕ ಸಂಪರ್ಕ ವಿವರಗಳನ್ನು ಕೊಡಲು ಒತ್ತಾಯಿಸದಂತೆ ಗ್ರಾಹಕರ ವ್ಯವಹಾರಗಳ ಸಚಿವಾಲಯವು ಚಿಲ್ಲರೆ ವ್ಯಾಪಾರಿಗಳಿಗೆ ಸೂಚನೆ ನೀಡಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.
 
ಯಾವುದೇ ಅಂಗಡಿಗಳಿಗೆ ಹೋದರೂ ಬಿಲ್ ಕೊಡುವ ಮೊದಲು ಮೊಬೈಲ್ ನಂಬರ್ ಕೊಡುವಂತೆ ಕೇಳುತ್ತಾರೆ. ಗ್ರಾಹಕರು ತಮ್ಮ ವೈಯಕ್ತಿಕ ನಂಬರ್ ಕೊಡಲು ಒಪ್ಪದಿದ್ದಾಗ ಅವರಿಗೆ ಸೇವೆಗಳನ್ನು ಒದಗಿಸಲಿಲ್ಲ ಎಂದು ಹಲವು ಗ್ರಾಹಕರು ದೂರು ನೀಡಿದ್ದರು. ಗ್ರಾಹಕರು ನೀಡಿದ ದೂರಿನ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ. 

ವೈಯಕ್ತಿಕ ಸಂಪರ್ಕ ವಿವರಗಳನ್ನು ಕೊಡುವವರೆಗೆ ಬಿಲ್ ಕೊಡಲಾಗುವುದಿಲ್ಲ ಎಂದು ಮಾರಾಟಗಾರರು ಹೇಳುತ್ತಾರೆ. ಗ್ರಾಹಕರ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಇದು ನಿರ್ಬಂಧಿತ ವ್ಯಾಪಾರ ಪದ್ಧತಿಯಾಗಿದ್ದು, ಮಾಹಿತಿ ಸಂಗ್ರಹಿಸಲು ಗ್ರಾಹಕರನ್ನು ಒತ್ತಾಯಿಸುವಂತಿಲ್ಲ. ಅಲ್ಲದೇ ಗೌಪ್ಯತೆ ಕಪಾಡುವ ಸಲುವಾಗಿ ಚಿಲ್ಲರೆ ಉದ್ಯಮ ಮತ್ತು ಉದ್ಯಮ ಚೇಂಬರ್ಗಳಾದ ಸಿಐಐ ಹಾಗೂ ಎಫ್ಐಸಿಸಿಐಗಳಿಗೆ ಸೂಚನೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments