Webdunia - Bharat's app for daily news and videos

Install App

ಯುದ್ಧ ನಿಲ್ಲಿಸಿ ಎಂದು ಪುಟಿನ್‌ಗೆ ನಾವು ಹೇಳಬಹುದೇ : ಸಿಜೆಐ

Webdunia
ಗುರುವಾರ, 3 ಮಾರ್ಚ್ 2022 (12:52 IST)
ನವದೆಹಲಿ : ಉಕ್ರೇನ್ ಗಡಿಯಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರ ಕುರಿತ ಮನವಿಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ವಿಚಾರಣೆ ನಡೆಸುತ್ತಿದ್ದಾರೆ.

ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಕೇಳಿಬಂದಿದೆ.

ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ವಿರುದ್ಧ ವ್ಯಕ್ತವಾಗಿರುವ ಪ್ರಶ್ನೆ ಕುರಿತು ಅಚ್ಚರಿ ವ್ಯಕ್ತಪಡಿಸಿರುವ ಸಿಜೆಐ, ಯುದ್ಧವನ್ನು ನಿಲ್ಲಿಸುವಂತೆ ನಾನು ರಷ್ಯಾ ಅಧ್ಯಕ್ಷ ಪುಟಿನ್ ಅವರಿಗೆ ಹೇಳಬಹುದೇ ಎಂದು ಪ್ರಶ್ನಿಸಿದ್ದಾರೆ.

ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮೇಲೆ ನಮಗೆ ಸಹಾನುಭೂತಿ ಇದೆ. ಅವರನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ತನ್ನ ಕೆಲಸವನ್ನು ಮಾಡುತ್ತಿದೆ. ನಾವು ಏನು ಮಾಡಬಹುದು ಎಂದು ಅಟಾರ್ನಿ ಜನರಲ್ ಅವರನ್ನು ಕೇಳಿದ್ದೇವೆ ಎಂದು ಸಿಜೆಐ ತಿಳಿಸಿದ್ದಾರೆ. 

ಉಕ್ರೇನ್ನ ಪಶ್ಚಿಮ ಭಾಗದ ನೆರೆರಾಷ್ಟ್ರಗಳಾದ ರೊಮೇನಿಯಾ, ಹಂಗೇರಿ, ಪೋಲ್ಯಾಂಡ್ ಮೂಲಕ ಭಾರತ ತನ್ನ ಪ್ರಜೆಗಳನ್ನು ವಿಶೇಷ ವಿಮಾನಗಳ ಮೂಲಕ ಸ್ಥಳಾಂತರಿಸುವ ಕಾರ್ಯಾಚರಣೆ ನಡೆಸುತ್ತಿದೆ. ಫೆ.24ರಿಂದ ಉಕ್ರೇನ್ ವಾಯುಮಾರ್ಗ ಸ್ಥಗಿತಗೊಂಡಿರುವ ಕಾರಣ ಈ ಕ್ರಮವಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಬರ್ತಾರೆಂದು ಮೆಟ್ರೋ ನಿಲ್ದಾಣ ಕ್ಲೀನಿಂಗ್: ದಿನಕ್ಕೊಂದು ಕಡೆ ಪಾದ ಬೆಳೆಸಿ ಸಾರ್ ಎಂದ ನೆಟ್ಟಿಗರು

ಕನ್ನಡ ಮಾತನಾಡಲ್ಲ ಎಂದಿದ್ದ ಎಸ್ ಬಿಐ ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು

Chhattisgarh Encounter: ಛತ್ತೀಸ್‌ಗಢದಲ್ಲಿ ಗುಂಡಿನ ಸದ್ದು: 26 ನಕ್ಸಲನ್ನು ಬೇಟೆಯಾಡಿದ ಭದ್ರತಾ ಪಡೆ

ಮುಂದಿನ ಸುದ್ದಿ
Show comments