Webdunia - Bharat's app for daily news and videos

Install App

ಭಾರತದಿಂದ ಬರುವ ವಿಮಾನಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಕೆನಡಾ

Webdunia
ಭಾನುವಾರ, 26 ಸೆಪ್ಟಂಬರ್ 2021 (15:19 IST)
ನವದೆಹಲಿ : ಕೋವಿಡ್-19 ಸಾಂಕ್ರಾಮಿಕದ ಕಾರಣ ಭಾರತದಿಂದ ಬರುವ ವಿಮಾನಗಳ ಮೇಲೆ ಹೇರಿದ್ದ ನಿರ್ಬಂಧವನ್ನು ಕೆನಡಾ ತೆರವುಗೊಳಿಸಿದೆ. ನೇರ ಮತ್ತು ಬೇರೊಂದು ದೇಶದ ಮೂಲಕ ಕೆನಡಾ ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ.

ಭಾರತದಿಂದ ನೇರ ಕೆನಡಾಗೆ ವಿಮಾನಯಾನ ಕೈಗೊಳ್ಳುವವರು ಪ್ರಯಾಣದ 18 ಗಂಟೆ ಒಳಗಾಗಿ ಕೋವಿಡ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಮೆಟ್ರೊ ನಿಲ್ದಾಣದ ಬಳಿ ಇರುವ 'ಜೆನೆಸ್ಟ್ರಿಂಗ್ಸ್ ಪ್ರಯೋಗಾಲಯ'ದಲ್ಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕೆನಡಾ ಸರ್ಕಾರ ತಿಳಿಸಿದೆ.
ಈಗಾಗಲೇ ಕೋವಿಡ್ ತಗುಲಿ ಗುಣಮುಖರಾದವರಾಗಿದ್ದರೆ ಭಾರತದ ಯಾವುದೇ ಅಧಿಕೃತ ಪ್ರಯೋಗಾಲಯದಿಂದ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿದ್ದರೆ ಸಾಕು ಎಂದು ಕೆನಡಾ ಹೇಳಿದೆ.
ಈ ನಿಯಮಗಳನ್ನು ಪಾಲಿಸದಿದ್ದರೆ ವಿಮಾನ ಪ್ರಯಾಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದೂ ಹೇಳಿದೆ. ಬೇರೊಂದು ದೇಶದ ಮೂಲಕ ಕೆನಡಾಗೆ ತೆರಳುವವರಾಗಿದ್ದರೆ, ಆ ದೇಶದಿಂದ ನೆಗೆಟಿವ್ ಪ್ರಮಾಣಪತ್ರ ತರಬೇಕು ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ನಶಾ ಮುಕ್ತ ಭಾರತ ನಿರ್ಮಾಣಕ್ಕೆ ನರೇಂದ್ರ ಮೋದಿ ಸಂಕಲ್ಪ: ಮಹತ್ವದ ಅಭಿಯಾನಕ್ಕೆ ಪ್ರಧಾನಿಯಿಂದ ಚಾಲನೆ

ಕಾವೇರಿ ನೀರಿ ಹಂಚಿಕೆ ವಿಚಾರ, ಸರ್ವಪಕ್ಷ ಸಭೆಯಲ್ಲಿ ಡಿಕೆ ಶಿವಕುಮಾರ್ ಆಡಿದ ಮಾತು ಇಲ್ಲಿದೆ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮುಂದಿನ ಸುದ್ದಿ
Show comments