Webdunia - Bharat's app for daily news and videos

Install App

ಭಾರತದಿಂದ ಬರುವ ವಿಮಾನಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಕೆನಡಾ

Webdunia
ಭಾನುವಾರ, 26 ಸೆಪ್ಟಂಬರ್ 2021 (15:19 IST)
ನವದೆಹಲಿ : ಕೋವಿಡ್-19 ಸಾಂಕ್ರಾಮಿಕದ ಕಾರಣ ಭಾರತದಿಂದ ಬರುವ ವಿಮಾನಗಳ ಮೇಲೆ ಹೇರಿದ್ದ ನಿರ್ಬಂಧವನ್ನು ಕೆನಡಾ ತೆರವುಗೊಳಿಸಿದೆ. ನೇರ ಮತ್ತು ಬೇರೊಂದು ದೇಶದ ಮೂಲಕ ಕೆನಡಾ ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ.

ಭಾರತದಿಂದ ನೇರ ಕೆನಡಾಗೆ ವಿಮಾನಯಾನ ಕೈಗೊಳ್ಳುವವರು ಪ್ರಯಾಣದ 18 ಗಂಟೆ ಒಳಗಾಗಿ ಕೋವಿಡ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ. ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಮೆಟ್ರೊ ನಿಲ್ದಾಣದ ಬಳಿ ಇರುವ 'ಜೆನೆಸ್ಟ್ರಿಂಗ್ಸ್ ಪ್ರಯೋಗಾಲಯ'ದಲ್ಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಕೆನಡಾ ಸರ್ಕಾರ ತಿಳಿಸಿದೆ.
ಈಗಾಗಲೇ ಕೋವಿಡ್ ತಗುಲಿ ಗುಣಮುಖರಾದವರಾಗಿದ್ದರೆ ಭಾರತದ ಯಾವುದೇ ಅಧಿಕೃತ ಪ್ರಯೋಗಾಲಯದಿಂದ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಹೊಂದಿದ್ದರೆ ಸಾಕು ಎಂದು ಕೆನಡಾ ಹೇಳಿದೆ.
ಈ ನಿಯಮಗಳನ್ನು ಪಾಲಿಸದಿದ್ದರೆ ವಿಮಾನ ಪ್ರಯಾಣಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂದೂ ಹೇಳಿದೆ. ಬೇರೊಂದು ದೇಶದ ಮೂಲಕ ಕೆನಡಾಗೆ ತೆರಳುವವರಾಗಿದ್ದರೆ, ಆ ದೇಶದಿಂದ ನೆಗೆಟಿವ್ ಪ್ರಮಾಣಪತ್ರ ತರಬೇಕು ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments