ಸದನದಲ್ಲಿ ಸದ್ದು ರೈತ ಮಹಿಳೆ ಪ್ರಕರಣ

Webdunia
ಮಂಗಳವಾರ, 8 ಮಾರ್ಚ್ 2022 (16:34 IST)
ಬೆಂಗಳೂರು : ಮುಂಡರಗಿ ತಾಲೂಕಿನಲ್ಲಿ ರೈತ ಮಹಿಳೆಯರು ವಿಷ ಕುಡಿದ ಪ್ರಕರಣ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು.

ಅರಣ್ಯ ಇಲಾಖೆಯ ಕಿರುಕುಳದಿಂದ ವಿಷ ಕುಡಿದ ಪ್ರಕರಣವನ್ನು ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಶಾಸಕ ಎಚ್ಕೆ ಪಾಟೀಲ್ ಪ್ರಸ್ತಾಪ ಮಾಡಿ ಗಂಭೀರತೆಯನ್ನು ವಿವರಿಸಿದರು.

ಇದೇ ವೇಳೆ ಎಚ್.ಕೆ. ಪಾಟೀಲ್ ಬೆಂಬಲಕ್ಕೆ ಮಾಜಿ ಸಿಎಂ ಯಡಿಯೂರಪ್ಪ ನಿಂತರು. ಇದೊಂದು ಗಂಭೀರವಾದ ಪ್ರಕರಣ. ಎಚ್.ಕೆ. ಪಾಟೀಲ್ ಹೇಳಿರುವುದು ಸತ್ಯವಾಗಿದೆ. ಸಿಎಂ ಆದಷ್ಟು ಬೇಗ ಕ್ರಮವಹಿಸಿ ಸಮಸ್ಯೆ ಕೊನೆಗಾಣಿಸಬೇಕು. ಸಮಸ್ಯೆ ಮುಂದುವರಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವುದಿಲ್ಲ. ಅಗತ್ಯ ಬಿದ್ದರೆ ಸದನ ಸಮಿತಿ ರಚಿಸಿ ಎಂದು ಯಡಿಯೂರಪ್ಪ ಆಗ್ರಹಿಸಿದರು.

ಇನ್ನೊಂದೆಡೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಧ್ವನಿಗೂಡಿಸಿ ಸಮಸ್ಯೆ ಪರಿಹಾರ ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯಾಧಿಕಾರಿಗಳ ಧೋರಣೆ ಸರಿಯಲ್ಲ. ಕೂಡಲೇ ಸಾಗುವಳಿ ಮಾಡಿದ ರೈತರ ಸಂಕಷ್ಟ ಪರಿಹಾರ ಮಾಡಲು ಆಗ್ರಹಿಸಿದರು.

ಇದೇ ವೇಳೆ ಸ್ಪೀಕರ್ ಕಾಗೇರಿ ಸೇರಿದಂತೆ ಬಹುತೇಕ ಹಿರಿಯ ಸದಸ್ಯರಿಂದ ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದರು. 

ಇನ್ನು ಅರಣ್ಯ ಸಚಿವ ಉಮೇಶ್ ಕತ್ತಿಗೆ ಸದನದಲ್ಲಿ ಆಡಳಿತ ಪಕ್ಷದ ಶಾಸಕ ಕಳಕಪ್ಪ ಬಂಡಿ ಟಕ್ಕರ್ ಕೊಟ್ಟರು. ಅರಣ್ಯ ಇಲಾಖೆ ಬ್ರಿಟಿಷರ ಪಳೆಯುಳಿಕೆಯಾಗಿದೆ. ಅರಣ್ಯ ಸಚಿವರಿಗೆ ಇಲಾಖೆಯ ಬಗ್ಗೆ ಮಾಹಿತಿ ಇಲ್ಲ, ಅವರು ಬಯಲು ಸೀಮೆಯವರು ಅಂತಾ ಕಳಕಪ್ಪ ಬಂಡಿ ಕಿಡಿಕಾರಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments