Webdunia - Bharat's app for daily news and videos

Install App

CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ 99.37ರಷ್ಟು ಮಕ್ಕಳು ಪಾಸ್!

Webdunia
ಶುಕ್ರವಾರ, 30 ಜುಲೈ 2021 (17:49 IST)
ನವದೆಹಲಿ(ಜು.30): ಕೋವಿಡ್ ಹಿನ್ನೆಲೆಯಲ್ಲಿ ರದ್ದಾದ 12ನೇ ತರಗತಿ ಸಿಬಿಎಸ್ಇ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಶೇ.99.37 ಫಲಿತಾಂಶದೊಂದಿಗೆ 12.96 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 10 ಹಾಗೂ 11ನೇ ತರಗತಿಯ ಫೈನಲ್ ರಿಸಲ್ಟ್ ಹಾಗೂ 12ನೇ ತರಗತಿಯ ಪ್ರೀ ಬೋರ್ಡ್ ಎಕ್ಸಾಂ ಅಂಕಗಳನ್ನಾಧರಿಸಿ ಈ ಫಲಿತಾಂಶ ನೀಡಲಾಗಿದೆ.

ಅಧಿಕೃತ ವೆಬ್ಸೈಟ್  cbseresults.nic.inಅಥವಾ cbse.gov.inನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.
* ಸಿಬಿಎಸ್ಇಯು 12ನೇ ತರಗತಿ ಫಲಿತಾಂಶ
* ಶೇ.99.37 ಫಲಿತಾಂಶದೊಂದಿಗೆ 12.96 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ
* ದೆಹಲಿ ವಿದ್ಯಾರ್ಥಿಗಳು ಶೇ.99.84ರಷ್ಟು ಫಲಿತಾಂಶದೊಂದಿಗೆ ಉತ್ತೀರ್ಣ
ದೆಹಲಿ ವಿದ್ಯಾರ್ಥಿಗಳು ಶೇ.99.84ರಷ್ಟು ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಸುಮಾರು 1,50,152 ಮಂದಿ ವಿದ್ಯಾರ್ಥಿಗಳು ಶೇ.90ರಷ್ಟು ಅಂಗಳನ್ನು ಗಳಿಸಿದ್ದಾರೆ, 70,004 ವಿದ್ಯಾರ್ಥಿಗಳು ಶೇ.95ರಷ್ಟು ಫಲಿತಾಂಶ ಗಳಿಸಿದ್ದಾರೆ.
ಈ ಸೂತ್ರದ ಆಧಾರದಲ್ಲಿ ಫಲಿತಾಂಶ
ಈ ಬಾರಿ ಸಿಬಿಎಸ್ಇ 12ನೇ ತರಗತಿ ಫಲಿತಾಂಶ 30:30:40 ಸೂತ್ರದಡಿ ತಯಾರಿಸಲಾಗಿದೆ. 10 ಮತ್ತು 11ನೇ ತರಗತಿ ಅಂತಿಮ ಪರೀಕ್ಷೆ ಅಂಕ ಮತ್ತು 12ನೇ ತರಗತಿಯಲ್ಲಿ ಈಗಾಗಲೇ ನಡೆಸಿರುವ ಪೂರ್ವ ಸಿದ್ಧತಾ ಪರೀಕ್ಷೆಗಳ ಅಂಕ ಆಧರಿಸಿ 30:30:40 ಅನುಪಾತ ಆಧರಿಸಿ ಫಲಿತಾಂಶ ಪ್ರಕಟಿಸಲಾಗಿದೆ.
ಫಲಿತಾಂಶ ವೀಕ್ಷಣೆ ಹೇಗೆ.?
ವಿದ್ಯಾರ್ಥಿಗಳು ಇಂದು, ಜುಲೈ 30ರಂದು ಮಧ್ಯಾಹ್ನ ಪ್ರಕಟಗೊಂಡಿರುವ ಅಃSಇ 12ನೇ ತರಗತಿ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ  cbseresults.nic.inಅಥವಾ cbse.gov.inಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ ನೋಡಬಹುದು. ಅಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ ತಮ್ಮ ಫಲಿತಾಂಶ ಪಡೆಯಬಹುದು.
ಮೋದಿ ನೇತೃತ್ವದ ಸಭೆಯಲ್ಲಿ ಪರೀಕ್ಷೆ ರದ್ದು
ಜೂ.1ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 12ನೇ ತರಗತಿ ಸಿಬಿಎಸ್ಇ ಪರೀಕ್ಷೆ ರದ್ದು ಮಾಡಲಾಗಿತ್ತು. ಇದರ ಬೆನ್ನಲ್ಲೇ ಐಸಿಎಸ್ಇ ಪರೀಕ್ಷೆ ರದ್ದು ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ರಾಹುಲ್ ಗಾಂಧಿ ಮತಕಳ್ಳತನದ ಪ್ರತಿಭಟನೆ ಯಾವಾಗ ಡಿಕೆ ಶಿವಕುಮಾರ್ ಹೇಳಿದ್ದೇನು

ಚುನಾವಣಾ ಆಯೋಗದ ಅನ್ಯಾಯದ ಬಗ್ಗೆ ಹೋರಾಡಬೇಕಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments