Webdunia - Bharat's app for daily news and videos

Install App

ಗಗನಕ್ಕೇರಿದ ಟೊಮೆಟೊ ಬೆಲೆ!

Webdunia
ಗುರುವಾರ, 25 ನವೆಂಬರ್ 2021 (10:15 IST)
ಹಾಸನ : ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆಯಿಂದ ಫಸಲು ಹಾನಿಯಾಗಿರುವುದಷ್ಟೇ ಅಲ್ಲದೇ ಸಾಗಣೆ ವೆಚ್ಚ ಅಧಿಕವಾಗಿ ತರಕಾರಿ ದರ ಗಗನಕ್ಕೇರಿದೆ.
ಇಂಧನ ದರ, ಎಲ್ಪಿಜಿ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ದರ ಏರಿಕೆಯಿಂದ ಹೈರಾಣಾಗಿರುವ ಗ್ರಾಹಕರಿಗೆ ತರಕಾರಿ ತುಟ್ಟಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಆರ್ಭಟಿಸುತ್ತಿರುವುದರಿಂದ ತೇವಾಂಶ ಹೆಚ್ಚಾಗಿ ತರಕಾರಿಗಳು ಕೊಳೆಯುತ್ತಿವೆ. ಫಸಲು ಮಣ್ಣು ಪಾಲಾಗುತ್ತಿರುವುದು ತರಕಾರಿ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎನ್ನುತ್ತಾರೆ ವರ್ತಕರು. ಅದರಲ್ಲೂ ಟೊಮೆಟೊ ಬೆಲೆ ಪ್ರತಿದಿನ ಏರಿಳಿತ ಕಾಣುತ್ತಿದ್ದು, ಕಟ್ಟಿನ ಕೆರೆ ಮಾರುಕಟ್ಟೆಯಲ್ಲಿ ಟೊಮೆಟೊ ಕೆ.ಜಿ. 85ಕ್ಕೆ ಮಾರಾಟವಾದರೆ, ಈರುಳ್ಳಿ ಕೆ.ಜಿ. 60ಕ್ಕೇರಿದೆ.
ಹಾಸನ ತಾಲೂಕು ಸುತ್ತಮುತ್ತ, ಹಳೇಬೀಡು, ಬೇಲೂರು, ಅರಕಲಗೂಡು ಹಾಗೂ ಬೆಂಗಳೂರು ಕಡೆಗಳಿಂದ ನಗರಕ್ಕೆ ಟೊಮೆಟೊ ಬರುತ್ತದೆ. ಆದರೆ, ಮಳೆ ಕಾರಣದಿಂದಾಗಿ ಕೆಲವೆಡೆ ಬೆಳೆ ಹಾನಿಯಾಗಿದೆ. ಸ್ಥಳೀಯವಾಗಿ ಬೆಳೆಯುತ್ತಿದ್ದ ಟೊಮೆಟೊ ಈಗ ಮಾರುಕಟ್ಟೆಗೆ ಬಾರದ ಕಾರಣ ದರ ಹೆಚ್ಚಾಗಿದೆ ಎನ್ನುತ್ತಾರೆ ವ್ಯಾಪಾರಿಗಳು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments