ಗಗನಕ್ಕೇರಿದ ಟೊಮೆಟೊ ಬೆಲೆ!

Webdunia
ಗುರುವಾರ, 25 ನವೆಂಬರ್ 2021 (10:15 IST)
ಹಾಸನ : ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆಯಿಂದ ಫಸಲು ಹಾನಿಯಾಗಿರುವುದಷ್ಟೇ ಅಲ್ಲದೇ ಸಾಗಣೆ ವೆಚ್ಚ ಅಧಿಕವಾಗಿ ತರಕಾರಿ ದರ ಗಗನಕ್ಕೇರಿದೆ.
ಇಂಧನ ದರ, ಎಲ್ಪಿಜಿ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ದರ ಏರಿಕೆಯಿಂದ ಹೈರಾಣಾಗಿರುವ ಗ್ರಾಹಕರಿಗೆ ತರಕಾರಿ ತುಟ್ಟಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಆರ್ಭಟಿಸುತ್ತಿರುವುದರಿಂದ ತೇವಾಂಶ ಹೆಚ್ಚಾಗಿ ತರಕಾರಿಗಳು ಕೊಳೆಯುತ್ತಿವೆ. ಫಸಲು ಮಣ್ಣು ಪಾಲಾಗುತ್ತಿರುವುದು ತರಕಾರಿ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎನ್ನುತ್ತಾರೆ ವರ್ತಕರು. ಅದರಲ್ಲೂ ಟೊಮೆಟೊ ಬೆಲೆ ಪ್ರತಿದಿನ ಏರಿಳಿತ ಕಾಣುತ್ತಿದ್ದು, ಕಟ್ಟಿನ ಕೆರೆ ಮಾರುಕಟ್ಟೆಯಲ್ಲಿ ಟೊಮೆಟೊ ಕೆ.ಜಿ. 85ಕ್ಕೆ ಮಾರಾಟವಾದರೆ, ಈರುಳ್ಳಿ ಕೆ.ಜಿ. 60ಕ್ಕೇರಿದೆ.
ಹಾಸನ ತಾಲೂಕು ಸುತ್ತಮುತ್ತ, ಹಳೇಬೀಡು, ಬೇಲೂರು, ಅರಕಲಗೂಡು ಹಾಗೂ ಬೆಂಗಳೂರು ಕಡೆಗಳಿಂದ ನಗರಕ್ಕೆ ಟೊಮೆಟೊ ಬರುತ್ತದೆ. ಆದರೆ, ಮಳೆ ಕಾರಣದಿಂದಾಗಿ ಕೆಲವೆಡೆ ಬೆಳೆ ಹಾನಿಯಾಗಿದೆ. ಸ್ಥಳೀಯವಾಗಿ ಬೆಳೆಯುತ್ತಿದ್ದ ಟೊಮೆಟೊ ಈಗ ಮಾರುಕಟ್ಟೆಗೆ ಬಾರದ ಕಾರಣ ದರ ಹೆಚ್ಚಾಗಿದೆ ಎನ್ನುತ್ತಾರೆ ವ್ಯಾಪಾರಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಸೆಂಟ್ರಲ್ ಜೈಲ್ ಶಿಕ್ಷಾಬಂಧಿ ಪಿಯುಸಿಯಲ್ಲಿ ಫಸ್ಟ್ ಕ್ಲಾಸ್ ಪಾಸ್‌

ಬೆಂಗಳೂರಿನಲ್ಲಿರುವ ಜನರೇ ಹುಷಾರ್‌, ಮುಂದಿನ ಮೂರು ದಿನದ ಹವಾಮಾನ ಬದಲಾವಣೆಗೆ ರೆಡಿಯಾಗಿರಿ

ಇದೇ 11ರಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ, ಯಾಕೆ ಗೊತ್ತಾ

ಮಂಗಳೂರು, ಆಟೋ ಗ್ಯಾಸ್‌ಗೆ ಕೊರತೆ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ

ಯಾರನ್ನೂ ಪ್ರೀತಿಸಬೇಡಿ, ಎಲ್ಲರೂ ವಂಚಕರೇ: ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

ಮುಂದಿನ ಸುದ್ದಿ
Show comments