Webdunia - Bharat's app for daily news and videos

Install App

ಗಗನಕ್ಕೇರಿದ ಟೊಮೆಟೊ ಬೆಲೆ!

Webdunia
ಗುರುವಾರ, 25 ನವೆಂಬರ್ 2021 (10:15 IST)
ಹಾಸನ : ಜಿಲ್ಲಾದ್ಯಂತ ಸುರಿಯುತ್ತಿರುವ ಮಳೆಯಿಂದ ಫಸಲು ಹಾನಿಯಾಗಿರುವುದಷ್ಟೇ ಅಲ್ಲದೇ ಸಾಗಣೆ ವೆಚ್ಚ ಅಧಿಕವಾಗಿ ತರಕಾರಿ ದರ ಗಗನಕ್ಕೇರಿದೆ.
ಇಂಧನ ದರ, ಎಲ್ಪಿಜಿ ಸಿಲಿಂಡರ್ ಮತ್ತು ಅಗತ್ಯ ವಸ್ತುಗಳ ದರ ಏರಿಕೆಯಿಂದ ಹೈರಾಣಾಗಿರುವ ಗ್ರಾಹಕರಿಗೆ ತರಕಾರಿ ತುಟ್ಟಿಯಾಗಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಆರ್ಭಟಿಸುತ್ತಿರುವುದರಿಂದ ತೇವಾಂಶ ಹೆಚ್ಚಾಗಿ ತರಕಾರಿಗಳು ಕೊಳೆಯುತ್ತಿವೆ. ಫಸಲು ಮಣ್ಣು ಪಾಲಾಗುತ್ತಿರುವುದು ತರಕಾರಿ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎನ್ನುತ್ತಾರೆ ವರ್ತಕರು. ಅದರಲ್ಲೂ ಟೊಮೆಟೊ ಬೆಲೆ ಪ್ರತಿದಿನ ಏರಿಳಿತ ಕಾಣುತ್ತಿದ್ದು, ಕಟ್ಟಿನ ಕೆರೆ ಮಾರುಕಟ್ಟೆಯಲ್ಲಿ ಟೊಮೆಟೊ ಕೆ.ಜಿ. 85ಕ್ಕೆ ಮಾರಾಟವಾದರೆ, ಈರುಳ್ಳಿ ಕೆ.ಜಿ. 60ಕ್ಕೇರಿದೆ.
ಹಾಸನ ತಾಲೂಕು ಸುತ್ತಮುತ್ತ, ಹಳೇಬೀಡು, ಬೇಲೂರು, ಅರಕಲಗೂಡು ಹಾಗೂ ಬೆಂಗಳೂರು ಕಡೆಗಳಿಂದ ನಗರಕ್ಕೆ ಟೊಮೆಟೊ ಬರುತ್ತದೆ. ಆದರೆ, ಮಳೆ ಕಾರಣದಿಂದಾಗಿ ಕೆಲವೆಡೆ ಬೆಳೆ ಹಾನಿಯಾಗಿದೆ. ಸ್ಥಳೀಯವಾಗಿ ಬೆಳೆಯುತ್ತಿದ್ದ ಟೊಮೆಟೊ ಈಗ ಮಾರುಕಟ್ಟೆಗೆ ಬಾರದ ಕಾರಣ ದರ ಹೆಚ್ಚಾಗಿದೆ ಎನ್ನುತ್ತಾರೆ ವ್ಯಾಪಾರಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments