Webdunia - Bharat's app for daily news and videos

Install App

ಕೇಂದ್ರ ಬಜೆಟ್ : ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್

Webdunia
ಶುಕ್ರವಾರ, 27 ಜನವರಿ 2023 (11:51 IST)
ನವದೆಹಲಿ : ಕೇಂದ್ರ ಬಜೆಟ್ ಸಿದ್ಧತೆ ಅಂತಿಮ ಹಂತಕ್ಕೆ ಬಂದಿದ್ದು, ದೆಹಲಿಯ ನಾರ್ಥ್ ಬ್ಲಾಕ್ನಲ್ಲಿರುವ ಹಣಕಾಸು ಸಚಿವಾಲಯದ ಮುಖ್ಯ ಕಚೇರಿಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಭ್ರಮಿಸಿದ್ದಾರೆ.

ಫೆ.1 ರಂದು ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚುವ ಮೂಲಕ ಅಂತಿಮ ಹಂತದ ಸಿದ್ಧತೆಗೆ ಚಾಲನೆ ನೀಡಲಾಯಿತು. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕಿಸನ್ರಾವ್ ಕರದ್ ಉಪಸ್ಥಿತರಿದ್ದರು.

ಬಜೆಟ್ನ ಸಿದ್ಧತೆಯನ್ನು ಗುಪ್ತವಾಗಿರಿಸುವ ಹಿನ್ನೆಲೆಯಲ್ಲಿ ಬಜೆಟ್ನಲ್ಲಿ ಸಿದ್ಧಪಡಿಸಲು ಭಾಗಿಯಾಗಿರುವ ಹಣಕಾಸು ಅಧಿಕಾರಿಗಳು ಸುಮಾರು 10 ದಿನಗಳ ಕಾಲ ಉತ್ತರ ಬ್ಲಾಕ್ನ ನೆಲಮಾಳಿಗೆಯಲ್ಲೇ ಇರಬೇಕು. ಆ ಸಿಬ್ಬಂದಿ ಎಲ್ಲರೂ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾರ್ಷಿಕ ಬಜೆಟ್ ಮಂಡಿಸುವವರೆಗೂ ಅಲ್ಲಿಯೇ ಇರುತ್ತಾರೆ.

ಬಜೆಟ್ನಲ್ಲಿರುವ ವಿಷಯಗಳು ಯಾವುದೇ ರೀತಿಯಲ್ಲೂ ಸೋರಿಕೆಯಾಗದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ.  ಹಲ್ವಾ ಸಮಾರಂಭದ ನಂತರ, ಬಜೆಟ್ ದಾಖಲೆಗಳನ್ನು ಮುದ್ರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

ಮುಂದಿನ ಸುದ್ದಿ
Show comments