Webdunia - Bharat's app for daily news and videos

Install App

ಕೇಂದ್ರ ಬಜೆಟ್ : ಹಲ್ವಾ ಹಂಚಿದ ನಿರ್ಮಲಾ ಸೀತಾರಾಮನ್

Webdunia
ಶುಕ್ರವಾರ, 27 ಜನವರಿ 2023 (11:51 IST)
ನವದೆಹಲಿ : ಕೇಂದ್ರ ಬಜೆಟ್ ಸಿದ್ಧತೆ ಅಂತಿಮ ಹಂತಕ್ಕೆ ಬಂದಿದ್ದು, ದೆಹಲಿಯ ನಾರ್ಥ್ ಬ್ಲಾಕ್ನಲ್ಲಿರುವ ಹಣಕಾಸು ಸಚಿವಾಲಯದ ಮುಖ್ಯ ಕಚೇರಿಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಭ್ರಮಿಸಿದ್ದಾರೆ.

ಫೆ.1 ರಂದು ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಿಬ್ಬಂದಿಗೆ ಹಲ್ವಾ ಹಂಚುವ ಮೂಲಕ ಅಂತಿಮ ಹಂತದ ಸಿದ್ಧತೆಗೆ ಚಾಲನೆ ನೀಡಲಾಯಿತು. ಈ ವೇಳೆ ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕಿಸನ್ರಾವ್ ಕರದ್ ಉಪಸ್ಥಿತರಿದ್ದರು.

ಬಜೆಟ್ನ ಸಿದ್ಧತೆಯನ್ನು ಗುಪ್ತವಾಗಿರಿಸುವ ಹಿನ್ನೆಲೆಯಲ್ಲಿ ಬಜೆಟ್ನಲ್ಲಿ ಸಿದ್ಧಪಡಿಸಲು ಭಾಗಿಯಾಗಿರುವ ಹಣಕಾಸು ಅಧಿಕಾರಿಗಳು ಸುಮಾರು 10 ದಿನಗಳ ಕಾಲ ಉತ್ತರ ಬ್ಲಾಕ್ನ ನೆಲಮಾಳಿಗೆಯಲ್ಲೇ ಇರಬೇಕು. ಆ ಸಿಬ್ಬಂದಿ ಎಲ್ಲರೂ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಾರ್ಷಿಕ ಬಜೆಟ್ ಮಂಡಿಸುವವರೆಗೂ ಅಲ್ಲಿಯೇ ಇರುತ್ತಾರೆ.

ಬಜೆಟ್ನಲ್ಲಿರುವ ವಿಷಯಗಳು ಯಾವುದೇ ರೀತಿಯಲ್ಲೂ ಸೋರಿಕೆಯಾಗದಂತೆ ನೋಡಿಕೊಳ್ಳಲು ಈ ಕ್ರಮ ತೆಗೆದುಕೊಳ್ಳಲಾಗಿದೆ.  ಹಲ್ವಾ ಸಮಾರಂಭದ ನಂತರ, ಬಜೆಟ್ ದಾಖಲೆಗಳನ್ನು ಮುದ್ರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments