Publish Date: Wed, 01 Feb 2023 (08:57 IST)
Updated Date: Wed, 01 Feb 2023 (09:44 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರದ ಕೊನೆಯ ಪೂರ್ಣಾವಧಿ ಬಜೆಟ್ ಮೇಲೆ ಕರ್ನಾಟಕದ ನಿರೀಕ್ಷೆಗಳು ಸಾಕಷ್ಟಿವೆ.
ರಾಷ್ಟ್ರೀಯ ಯೋಜನೆಗಳಾಗಿ ಎತ್ತಿನಹೊಳೆ, ಮಹದಾಯಿ ಪ್ರಾಜೆಕ್ಟ್, 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ ಬೆಂಬಲ, ರಾಜ್ಯದ ರೈಲ್ವೆ ಯೋಜನೆಗಳಿಗೆ ವೇಗ ಸಿಗುವ ನಿರೀಕ್ಷೆ (ಧಾರವಾಡ-ಕಿತ್ತೂರು-ಬೆಳಗಾವಿ ರೈಲ್ವೆ, ಹುಬ್ಬಳ್ಳಿ-ಅಂಕೋಲಾ ಸೇರಿ),
ಬೆಂಗಳೂರು ಮೆಟ್ರೋ ವಿಸ್ತರಣೆಗೆ ಹಣಕಾಸಿನ ನೆರವು, ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ, ಕರ್ನಾಟಕಕ್ಕೂ ಫಿನ್ಟೆಕ್ ಸಿಟಿ ಯೋಜನೆ ವಿಸ್ತರಣೆ (ಗುಜರಾತ್, ಉತ್ತರ ಪ್ರದೇಶ, ರಾಜಸ್ಥಾನ, ತಮಿಳುನಾಡಿಗೆ ನೀಡಲಾಗಿದೆ), ಸ್ಮಾರ್ಟ್ ಸಿಟಿಗಳ ಪಟ್ಟಿಗೆ ರಾಜ್ಯದ ಇನ್ನಷ್ಟು ನಗರ.