Webdunia - Bharat's app for daily news and videos

Install App

ಸಚಿವರ ಗೈರಿಗೆ ಸಭಾಪತಿಗಳು ಗರಂ!

Webdunia
ಬುಧವಾರ, 9 ಮಾರ್ಚ್ 2022 (15:42 IST)
ಬೆಂಗಳೂರು : ವಿಧಾನ ಪರಿಷತ್ ಕಲಾಪದ ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕಾದ ಸಚಿವರ ಗೈರಿನ ಬಗ್ಗೆ ಇವತ್ತು ಕೂಡಾ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಒಂದು ಹಂತದಲ್ಲಿ ಆಕ್ರೋಶಗೊಂಡ ಸಭಾಪತಿಗಳು ಇದೇನು ಬೀಗರ ಮನೆಯಾ ಎಂದು ಸಭಾನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿಧಾನ ಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ಕಲಾಪ ಮುಗಿಯುತ್ತಿದ್ದಂತೆ ಶೂನ್ಯವೇಳೆ ಕೈಗೆತ್ತಿಕೊಳ್ಳುವ ಮುನ್ನ ಸದನದಲ್ಲಿ ಕಡ್ಡಾಯವಾಗಿ ಹಾಜರಿರುವ ಸಚಿವರ ಹೆಸರುಗಳನ್ನು ಸಭಾಪತಿಗಳು ಓದಿ ಹೇಳಿದರು.

ಆದರೆ ಸಚಿವರಾದ ಅಶ್ವತ್ಥನಾರಾಯಣ, ಸುಧಾಕರ್, ನಾಗೇಶ್, ಸುನೀಲ್ ಕುಮಾರ್ ಸದನಕ್ಕೆ ಗೈರಾಗಿದ್ದರು. ಕೇವಲ ಓರ್ವ ಸಚಿವರು ಮಾತ್ರ ಹಾಜರಿದ್ದರು. ಸಚಿವರ ಗೈರಿಗೆ ಸಭಾಪತಿ ಗರಂ ಆಗಿದ್ದು, ಆಗ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಶೂನ್ಯವೇಳೆ ಆರಂಭಿಸಿ 10 ನಿಮಿಷದಲ್ಲಿ ಸಚಿವರು ಬರುತ್ತಾರೆ ಎಂದರು.  

ಸಭಾನಾಯಕರ ಹೇಳಿಕೆಗೆ ಕೆಂಡಾಮಂಡಲರಾದ ಸಭಾಪತಿಗಳು ಇದೇನು ಬೀಗರ ಮನೆಯಾ? ಎಂದು ಗರಂ ಆಗಿದ್ದಾರೆ. ನಾಳೆಯಿಂದ ಕಡ್ಡಾಯ ಹಾಜರಿರುವ ಸಚಿವರು ಎನ್ನುವುದನ್ನೇ ತೆಗೆದುಬಿಡಿ ಎಂದು ಕಿಡಿಕಾರಿದರು. ದಿನಾ ಇದೇ ರೀತಿ ಸಚಿವರು ಗೈರಾದರೆ ಸದನ ನಡೆಸೋದು ಹೇಗೆ? ಇನ್ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಿ ಎಂದು ಸಭಾಪತಿಗಳು ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments