ಮಳೆಯಿಂದ ಚಾರ್ಮಾಡಿ ಘಾಟ್ ಬಂದ್: ಆಹಾರವಿಲ್ಲದೇ ಪ್ರಯಾಣಿಕರ ಹಾಹಾಕಾರ

Webdunia
ಮಂಗಳವಾರ, 12 ಜೂನ್ 2018 (09:03 IST)
ಬೆಂಗಳೂರು: ಮಂಗಳೂರು-ಬೆಂಗಳೂರು ನಡುವೆ ಪ್ರಮುಖ ಸಂಪರ್ಕ ಮಾರ್ಗವಾದ ಚಾರ್ಮಾಡಿ ಘಾಟ್ ನಲ್ಲಿ ಮಳೆಯಿಂದಾಗಿ ಮರ, ಮಣ್ಣು ರಸ್ತೆಗೆ ಬಿದ್ದು ಮಾರ್ಗ ಬಂದ್ ಆಗಿದೆ. ಇದರಿಂದಾಗಿ ವಾಹನ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಹಲವಾರು ಬಸ್, ಕಾರು ಇತ್ಯಾದಿ ವಾಹನಗಳು ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜ್ಯಾಮ್ ನಲ್ಲಿ ಸಿಕ್ಕಿ ಹಾಕಿಕೊಂಡಿದ್ದು, ಪ್ರಯಾಣಿಕರು ಸರಿಯಾಗಿ ನೀರು, ಆಹಾರವಿಲ್ಲದೇ ನಿನ್ನೆ ಸಂಜೆಯಿಂದ ಕಾಡಿನ ಮಧ್ಯೆ ಪರದಾಡುತ್ತಿದ್ದಾರೆ.

ಈ ಭಾಗದಲ್ಲಿ ಮೊಬೈಲ್ ನೆಟ್ ವರ್ಕ್‍ ಕೂಡಾ ಸರಿಯಾಗಿ ಸಿಗುವುದಿಲ್ಲ. ಅಂಗಡಿಗಳು, ಮನೆಗಳೂ ಕಡಿಮೆ. ಹೀಗಾಗಿ ಪ್ರಯಾಣಿಕರ ಪರದಾಟ ಹೇಳತೀರದಂತಾಗಿದೆ. ರಸ್ತೆ ತೆರವುಗೊಳಿಸುವ ಕಾರ್ಯ ಪೂರ್ತಿಯಾಗದೇ ಇರುವುದರಿಂದ ಪ್ರಯಾಣಿಕರು ವಾಹನದಲ್ಲೇ ಸಮಯ ಕಳೆಯುವಂತಾಗಿದೆ. ಹೀಗಾಗಿ ಪ್ರಯಾಣಿಕರ ನೆರವಿಗೆ ಸ್ಥಳೀಯರು ಧಾವಿಸಿದ್ದು, ಹಾಲು, ಬ್ರೆಡ್, ಇತ್ಯಾದಿ ಸರಬರಾಜು ಮಾಡುತ್ತಿದ್ದಾರೆ. ಶಿರಾಡಿ ಘಾಟ್ ನಲ್ಲಿ ರಸ್ತೆ ರಿಪೇರಿ ನಡೆಯುತ್ತಿರುವುದರಿಂದ ಮಂಗಳೂರು ಕಡೆಯಿಂದ ಬೆಂಗಳೂರಿಗೆ ಸಾಗುವ ಎಲ್ಲಾ ವಾಹನಗಳೂ ಚಾರ್ಮಾಡಿ ಘಾಟ್ ಮಾರ್ಗವಾಗಿ ಸಾಗುತ್ತವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಎಲ್‌ಎಗಳ ಜತೆ ಫೋಟೋಗೆ ಫೋಸ್ ಕೊಟ್ಟ ಸಿಎಂ ಸಿದ್ದರಾಮಯ್ಯ, ರಾಜಕೀಯದಲ್ಲಿ ಭಾರಿ ಚರ್ಚೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರದಲ್ಲಿ ಮೂರನೇ ಬಾರಿ ಬಂದ ಆದೇಶವೇನು ಗೊತ್ತಾ

ಕ್ರಿಟಿಕಲ್ ಸ್ಥಿತಿಯಲ್ಲಿದ್ದ ಮಹಿಳೆ ದಾರಿ ಮಧ್ಯೆ ಸಾವು, ರಿಕ್ಷಾ ಡ್ರೈವರ್ ಮಾಡಿದ್ದೇನು ಗೊತ್ತಾ

ಅವನು ಸುಖವಾಗಿದ್ದಾನೆ, ಅಳುತ್ತಿದ್ದವರಿಗೆ ಹರೀಶ್ ರಾಣಾ ತಂದೆಯಾ ಭಾವುಕ ಮಾತು

ಮುಂದಿನ 2 ದಿನದಲ್ಲಿ ಕರಾವಳಿ ಹವಾಮಾನದಲ್ಲಿ ಭಾರೀ ಬದಲಾವಣೆ, ಮಳೆ ನಿರೀಕ್ಷಿಸಬಹುದಾ

ಮುಂದಿನ ಸುದ್ದಿ
Show comments