Webdunia - Bharat's app for daily news and videos

Install App

ಮುಖ್ಯಮಂತ್ರಿ ಸಿದ್ದರಾಮಯ್ಯ ಮೋಸಗಾರ, ಸುಳ್ಳುಗಾರ. ಇವರಿಗೆ ಬಡವರ ಬಗ್ಗೆ ಯಾವುದೇ ರೀತಿಯ ಕಳಕಳಿ ಇಲ್ಲ- ಜನಾರ್ದನ ರೆಡ್ಡಿ ವಾಗ್ದಾಳಿ

Webdunia
ಗುರುವಾರ, 26 ಏಪ್ರಿಲ್ 2018 (06:51 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮೋಸಗಾರ, ಸುಳ್ಳುಗಾರ. ಇವರಿಗೆ ಬಡವರ ಬಗ್ಗೆ ಯಾವುದೇ ರೀತಿಯ ಕಳಕಳಿ ಇಲ್ಲ. ರಾವಣನ ರೂಪದ ಸಿದ್ದರಾಮಯ್ಯನರ ಸಂಹಾರಕ್ಕೆ ರಾಮನಂತಿರುವ ಶ್ರೀರಾಮುಲು ಬಂದಿದ್ದಾರೆ ಎಂದು ಜನಾರ್ದನ ರೆಡ್ಡಿ ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ ಜನಾರ್ದನ ರೆಡ್ಡಿ 1ಲಕ್ಷ ಕೋಟಿ ರೂ.ಲೂಟಿ ಮಾಡಿದ್ದು, ಅದನ್ನು ವಸೂಲಿ ಮಾಡುವೆ ಅಂತ ಹೇಳಿದ್ದ ಸಿಎಂ ಸಿದ್ದರಾಮಯ್ಯ, ಅಧಿಕಾರಕ್ಕೆ ಬಂದು 5 ವರ್ಷಗಳೇ ಕಳೆದರೂ ನನ್ನಿಂದ ಒಂದು ರೂಪಾಯಿಯನ್ನು ಕೂಡ ವಸೂಲಿ ಮಾಡಲು ಆಗಲಿಲ್ಲ. ಜನಾರ್ದನ ರೆಡ್ಡಿ ಕೋಟ್ಯಂತರ ರೂ.ಲೂಟಿ ಮಾಡಿದ್ದಾರೆಂದು ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

 

ಅಲ್ಲದೆ ‘ಮೈಸೂರಿನ ಚಾಮುಂಡೇಶ್ವರಿ ಹಾಗೂ ಬನಶಂಕರಿ ತಾಯಿ ಇಬ್ಬರೂ ಸಿದ್ದರಾಮಯ್ಯರಿಗೆ ಆಶೀರ್ವಾದ ಮಾಡುವುದಿಲ್ಲ. ಮೊಳಕಾಲ್ಮೂರು ಕ್ಷೇತ್ರ ಹಾಗೂ ಬಾದಾಮಿ ಕ್ಷೇತ್ರದ ಜನತೆ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರನ್ನು ಅತ್ಯಂತ ಹೆಚ್ಚು ಬಹುಮತಗಳಿಂದ ಗೆಲ್ಲಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರಿಗೆ ಶ್ರೀರಾಮುಲು ಹಾಗೂ ವಿಜಯೇಂದ್ರ ಇಬ್ಬರೂ ಮಕ್ಕಳಿದ್ದಂತೆ ‘ ಎಂದು ಅವರು  ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments