Webdunia - Bharat's app for daily news and videos

Install App

ನಾಳೆಯಿಂದ ತರಗತಿ ಆರಂಭ : ನಾಗೇಶ್

Webdunia
ಭಾನುವಾರ, 13 ಫೆಬ್ರವರಿ 2022 (15:10 IST)
ಹಾಸನ : ನಾಳೆಯಿಂದ ಒಂಬತ್ತು ಮತ್ತು ಹತ್ತನೇ ತರಗತಿ ಆರಂಭವಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿಸಿ.ನಾಗೇಶ್ ತಿಳಿಸಿದ್ದಾರೆ.

ಹಿಜಬ್ ಮತ್ತು ಕೇಸರಿ ಶಾಲಿನ ವಿವಾದ ಜೋರಾಗುತ್ತಲೇ ಸರ್ಕಾರ ಶಾಲಾ, ಕಾಲೇಜಿಗೆ ರಜೆ ಘೋಷಣೆ ಮಾಡಿತ್ತು. ಇದೀಗ ನಾಳೆಯಿಂದ ಒಂಬತ್ತು ಮತ್ತು ಹತ್ತನೇ ತರಗತಿ ಆರಂಭವಾಗುತ್ತಿದ್ದು ಸೋಮವಾರ ನಡೆಯುವ ಸಿಎಂ ಸಭೆಯ ನಂತರ ಪಿಯುಸಿ ಹಾಗೂ ಪದವಿ ತರಗತಿಗಳನ್ನು ತೆರೆಯುವ ಬಗ್ಗೆ ಯೋಚನೆ ಮಾಡಿ ಸದ್ಯದಲ್ಲಿಯೇ ಈ ಬಗ್ಗೆ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ.

ಇದೇ ವೇಳೆ ಹಿಜಬ್ ಯೂನಿಫಾರ್ಮ್ ಅಂಗ ಅಲ್ಲ. ಯಾವ ಕಾರಣಕ್ಕೆ ಆ ಹೆಣ್ಣುಮಕ್ಕಳು ಆ ರೀತಿ ವರ್ತನೆ ಮಾಡಿದರು ಅರ್ಥ ಆಗುತ್ತಿಲ್ಲ. ಈ ಹಿಜಬ್ ವಿವಾದದ ಹಿಂದೆ ಕೆಲ ಮುಸ್ಲಿಂ ಸಂಘಟನೆಗಳ ಕೈವಾಡ ಇದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಎಲ್ಲ ಹೊರಬರಲಿದೆ ಎಂದಿದ್ದಾರೆ. 

ಒಟ್ಟಾರೆ ವಿದ್ಯಾ ದೇಗುಲದಲ್ಲಿ ಹಿಜಬ್ ಮತ್ತು ಕೇಸರಿ ಶಾಲಿನ ಗಲಾಟೆ ಆರಂಭವಾಗಿ ಶಿಕ್ಷಣ ವ್ಯವಸ್ಥೆಗೆ ಸಮಸ್ಯೆಯಾಗತೊಡಗಿತ್ತು. ಈ ಹಿನ್ನೆಲೆಯಲ್ಲಿ ಶಾಲಾ, ಕಾಲೇಜಿಗೆ ರಜೆ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮಾಡಲಾಗಿತ್ತು. ಇದೀಗ ನಾಳೆಯಿಂದ ಮತ್ತೆ ಒಂಬತ್ತು ಹತ್ತನೇ ತರಗತಿ ಆರಂಭವಾಗುತ್ತಿದ್ದು, ಇದಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಯಾವ ರೀತಿ ಸಹಕರಿಸುತ್ತಾರೆ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments