Select Your Language

Notifications

webdunia
webdunia
webdunia
webdunia

ದಾಳಿಯಿಂದ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಸಿಎಂ

ದಾಳಿಯಿಂದ ಮೃತಪಟ್ಟವರಿಗೆ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು , ಶನಿವಾರ, 3 ಡಿಸೆಂಬರ್ 2022 (14:49 IST)
ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲದಿನಗಳಿಂದ ಚಿರತೆ ಆತಂಕ ಮನೆ ಮಾಡಿದೆ. ಬೆಂಗಳೂರು ನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಚಿರತೆ ಕಂಡುಬಂದಿದ್ದು, ಕೆಲವರಿಗೆ ದಾಳಿ ನಡೆಸಿ ಬಲಿ ಪಡೆದಿದೆ.

ಇದೀಗ ಚಿರತೆ ದಾಳಿಯಲ್ಲಿ ಮೃತಪಟ್ಟವರಿಗೆ ಸಿಎಂ ಬಸವರಾಜ ಬೊಮ್ಮಾಯಿ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಚಿರತೆ ದಾಳಿಯಿಂದಾಗಿ ಮೈಸೂರಿನಲ್ಲಿ ನಿನ್ನೆ ಎರಡನೇ ಬಲಿಯಾಗಿತ್ತು.

ಈ ಬೆನ್ನಲ್ಲೇ ಚಿರತೆ ಕುರಿತಾಗಿ ಗಂಭೀರವಾಗಿ ಪರಿಗಣಿಸಿರುವ ಸಿಎಂ ಇಂದು ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ, ಚಿರತೆ ಹಾವಳಿಯನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದೇವೆ.

ಚಿರತೆಯನ್ನು ಜೀವಂತ ಹಿಡಿದು ಅರಣ್ಯಕ್ಕೆ ಬಿಡುವಂತೆ ಸೂಚಿಸಿದ್ದೇವೆ. ಚಿರತೆ ದಾಳಿಯಿಂದ ಮೃತಪಟ್ಟವರಿಗೆ 15 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಹಿಂದೆ ಆನೆ ದಾಳಿಯಿಂದ ಮೃತಪಟ್ಟವರಿಗೆ ನೀಡುತ್ತಿದ್ದಂತೆ ಪರಿಹಾರ ಇದೀಗ ಚಿರತೆ ದಾಳಿಯಿಂದ ಮೃತಪಟ್ಟವರಿಗೂ ನೀಡುತ್ತಿದ್ದೇವೆ ಎಂದಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಯಾವುದೇ ವ್ಯಕ್ತಿಯನ್ನು ವೈಯಕ್ತಿಕವಾಗಿ ಟಾರ್ಗೆಟ್ ಮಾಡಲ್ಲ : ಖರ್ಗೆ