ಯೋಧರ ಅನುದಾನ ಹೆಚ್ಚಳಕ್ಕೆ ಸಿಎಂ ಅಸ್ತು

Webdunia
ಗುರುವಾರ, 16 ಡಿಸೆಂಬರ್ 2021 (15:30 IST)
ಬೆಳಗಾವಿ : ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್ನ ತರಬೇತಿ ಶಾಲೆಯ ಯುದ್ಧ ಸ್ಮಾರಕಕ್ಕೆ ಗೌರವ ಸಲ್ಲಿಸಿದ ನಂತರ ಮಾತನಾಡಿ, ಪ್ರಶಸ್ತಿ ಮೊತ್ತದ ಆದೇಶವನ್ನು ಪ್ರಕಟಿಸಿದರು.

ಪರಮವೀರಚಕ್ರ ಪಡೆದವರಿಗೆ 25 ಲಕ್ಷ ರೂ.ದಿಂದ 1.5 ಕೋಟಿ ರೂ.ಗಳು, ಮಹಾವೀರಚಕ್ರ ವಿಜೇತರಿಗೆ 12 ಲಕ್ಷ ರೂ.ಗೆ ಬದಲಾಗಿ 1 ಕೋಟಿ ರೂ.ಗಳು, ಅಶೋಕ ಚಕ್ರ ಪಡೆದವರಿಗೆ 25 ಲಕ್ಷ ರೂ.ಗಳಿಗೆ ಬದಲಾಗಿ 1.5 ಕೋಟಿ ರೂ.ಗಳು, ಕೀರ್ತಿ ಚಕ್ರ ಪಡೆವರಿಗೆ 1 ಕೋಟಿ ರೂ.ಗಳು, ವೀರಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು,

ಶೌರ್ಯ ಚಕ್ರ ವಿಜೇತರಿಗೆ 50 ಲಕ್ಷ ರೂ.ಗಳು, ಸೇನಾ, ನೌಕಾ, ವಾಯು ಸೇನಾ ಮೆಡಲ್ ಪಡೆದವರಿಗೆ 15 ಲಕ್ಷ ರೂ.ಗಳು, ಮೆನ್ಶನ್ ಎನ್.ಡಿ.ಎಸ್ ಪ್ಯಾಚ್ ಪಡೆದವರಿಗೆ 15 ಲಕ್ಷ ರೂ.ಗಳನ್ನು ಹೆಚ್ಚಿಸಲು ಆದೇಶವನ್ನು ಹೊರಡಿಸಲಾಗಿದೆ ಎಂದು ವಿವರಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪವಿತ್ರ ಗಂಗಾ ನದಿ ಹಾಳು ಮಾಡಲು ಇಂಥವರು ಇದ್ರೆ ಸಾಕು: Video

ಪ್ರಧಾನಿ ಮೋದಿಗಾಗಿ ಭಾರತಿಯ ಉಡುಗೆ ತೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು: ವಿಡಿಯೋ

ಗ್ಯಾರಂಟಿಯಿಂದ ಆರ್ಥಿಕ ಹೊರೆ, ಆದ್ರೂ ಕೊಡ್ತಿದ್ದೀವಿ ಎಂದ ಡಿಕೆ ಶಿವಕುಮಾರ್

ಹಿಂದಿಗೆ ವಿರೋಧ ಮಾಡ್ತೀರಿ, ಉರ್ದು ಓಕೆನಾ...: ರಾಜ್ಯ ಸರ್ಕಾರದ ನಡೆಗೆ ಸಾರ್ವಜನಿಕರಿಂದ ಆಕ್ರೋಶ

ಬಾಲಕಿಯನ್ನು ತೊಡೆ ಮೇಲೆ ಕೂರಿಸಿದ ಮಲ್ಲಿಕಾರ್ಜುನ ಮುತ್ಯಾ ವಿಡಿಯೋ: ದೇವಮಾನವನಿಗೆ ಅರೆಸ್ಟ್ ಭೀತಿ

ಮುಂದಿನ ಸುದ್ದಿ
Show comments