Webdunia - Bharat's app for daily news and videos

Install App

ಅಂತಿಮ ಭಾಷಣಕ್ಕೆ ಸಿದ್ಧರಾದರೇ ಸಿಎಂ ಬಿಎಸ್ ವೈ?!!

Webdunia
ಶನಿವಾರ, 19 ಮೇ 2018 (13:42 IST)
ಬೆಂಗಳೂರು: ತಮ್ಮ ಸರ್ಕಾರ ವಿಶ್ವಾಸ ಮತ ಗೆಲ್ಲದಂತೆ ನಾಲ್ಕೂ ಕಡೆಗಳಿಂದ ಬಂಧನವಾಗುತ್ತಿದ್ದಂತೇ ಸಿಎಂ ಯಡಿಯೂರಪ್ಪ ತಮ್ಮ ಮೂರು ದಿನಗಳ ಸಿಂ ಹುದ್ದೆಗೆ ರಾಜೀನಾಮೆ ನೀಡಲು ಸಿದ್ಧತೆ ನಡೆಸಿದ್ದಾರೆಯೇ?

ವಿಶ್ವಾಸ ಮತ ಕಳೆದುಕೊಂಡರೆ ಸದನದಲ್ಲಿ ಭಾಷಣ ಮಾಡಲು 13 ಪುಟಗಳ ಭಾಷಣದ ಪ್ರತಿಯನ್ನು ಬಿಎಸ್ ವೈ ಸಿದ್ಧತೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದರಲ್ಲಿ ತಾವು ಅಧಿಕಾರದಲ್ಲಿದ್ದಿದ್ದರೆ ಮಾಡಬಹುದಾಗಿದ್ದ ಕಾರ್ಯಗಳ ಬಗ್ಗೆ ಹೇಳಲಿದ್ದಾರೆ ಎನ್ನಲಾಗಿದೆ.

ಆ ಮೂಲಕ ಅಧಿಕಾರದಿಂದ ಕೆಳಗಿಳಿಯುವ ಮೊದಲು ಭಾವನಾತ್ಮಕ ಭಾಷಣ ಮಾಡುವ ಯೋಜನೆ ಬಿಎಸ್ ವೈಗಿದೆ ಎನ್ನಲಾಗಿದೆ. ಅದೇನೇ ಇರಲಿ, ಇನ್ನೊಂದೆಡೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಲೆಕೆಡಿಸಿಕೊಳ್ಳದಂತೆ ಯಡಿಯೂರಪ್ಪನವರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಕಲಾಪ ಮುಂದೂಡಲಾಗಿದ್ದು, ಮಧ್ಯಾಹ್ನ 3.30 ರ ನಂತರ ಕಲಾಪ ನಡೆಯಲಿದೆ. ಆ ಬಳಿಕ ಯಡಿಯೂರಪ್ಪ ಸರ್ಕಾರದ ಭವಿಷ್ಯ ತಿಳಿಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments