Webdunia - Bharat's app for daily news and videos

Install App

ಸಚಿವೆ ನಿರ್ಮಲಾ ಸೀತಾರಾಂ ವಿವಾದಕ್ಕೆ ಸಿಎಂ ಎಚ್ ಡಿಕೆಯಿಂದ ತೇಪೆ

Webdunia
ಸೋಮವಾರ, 27 ಆಗಸ್ಟ್ 2018 (08:17 IST)
ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಕೊಡಗು ಪ್ರವಾಸದ ವೇಳೆ ನಡೆದ ವಿವಾದಕ್ಕೆ ಸಿಎಂ ಕುಮಾರಸ್ವಾಮಿ ತೇಪೆ ಹಚ್ಚುವ ಪ್ರಯತ್ನ ಮಾಡಿದ್ದಾರೆ.

ನಿರ್ಮಲಾ ಸೀತಾರಾಂ ಕೊಡಗು ಪ್ರವಾಸದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ ಸಿಎಂ ಕುಮಾರಸ್ವಾಮಿ ಅತ್ತ ರಕ್ಷಣಾ ಸಚಿವರಿಗೂ ಇತ್ತ ಜಿಲ್ಲಾ ಉಸ್ತುವಾರಿ ಸಚಿವರಿಗೂ ನೋವಾಗದಂತೆ ವಿವಾದ ತಣ್ಣಗಾಗಿಸಲು ಪ್ರಯತ್ನಿಸಿದ್ದಾರೆ.

ಕೊಡಗು ಪ್ರವಾಹದ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಜನರ ಸಂಕಷ್ಟಕ್ಕೆ ನೆರವಾಯಿತು. ರಕ್ಷಣಾ ಸಚಿವರು ಪರಿಹಾರ ಕಾರ್ಯ ವೀಕ್ಷಿಸಲು ಕೊಡಗಿಗೆ ಬಂದಾಗ ನಡೆದ ಅನನುಕೂಲಕ್ಕೆ ವಿಷಾಧಿಸುತ್ತೇನೆ. ಈ ಬಗ್ಗೆ ಅವರೊಂದಿಗೂ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಪರಿಹಾರ ಕಾರ್ಯದಲ್ಲಿ ಕೇಂದ್ರವೂ ನಮ್ಮ ಬೆಂಬಲಕ್ಕೆ ನಿಂತಿದೆ ಎಂದಿದ್ದಾರೆ. ಆ ಮೂಲಕ ವಿವಾದ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments