Webdunia - Bharat's app for daily news and videos

Install App

ಗದ್ದಲ ಮಾಡ್ಬೇಕಂದ್ರೆ ಕಬ್ಬನ್ ಪಾರ್ಕ್ ಗೆ ಹೋಗ್ರೀ.. ರೈತರ ನಾಯಕರ ಮೇಲೆ ಸಿಟ್ಟಾದ ಸಿಎಂ ಕುಮಾರಸ್ವಾಮಿ

Webdunia
ಬುಧವಾರ, 30 ಮೇ 2018 (12:43 IST)
ಬೆಂಗಳೂರು: ರೈತರ ಸಾಲಮನ್ನಾ ಕುರಿತು ರೈತ ನಾಯಕರೊಂದಿಗೆ ಸಂವಾದ ನಡೆಸುತ್ತಿರುವ ಸಿಎಂ ಕುಮಾರಸ್ವಾಮಿ ಸಭೆಯ ನಡುವೆ ರೈತ ನಾಯಕರ ಗದ್ದಲ ನೋಡಿ ತಾಳ್ಮೆ ಕಳೆದುಕೊಂಡ ಪ್ರಸಂಗ ನಡೆಯಿತು.

ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಜತೆಗೆ ರೈತ ನಾಯಕರೊಂದಿಗೆ ಸಭೆ ನಡೆಸುತ್ತಿದ್ದ ಸಿಎಂ ಸಾಲಮನ್ನಾ ಕುರಿತು ರೈತರ ಸಲಹೆ ಕೇಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅಂಕಿ ಅಂಶಗಳ ಕುರಿತು ರೈತ ನಾಯಕರಲ್ಲೇ ಗೊಂದಲ ಉಂಟಾಗಿ ಗದ್ದಲ ಉಂಟಾಯಿತು.

ಯಾರೂ ಯಾರ ಮಾತೂ ಕೇಳದ ಪರಿಸ್ಥಿತಿಗೆ ತಲುಪಿದಾಗ ಮೈಕ್ ಕೈಗೆ ತೆಗೆದುಕೊಂಡ ಸಿಎಂ ಕುಮಾರಸ್ವಾಮಿ ‘ನಾನು ಪಲಾಯನಾವದಿಯಲ್ಲ. ನಿಮ್ಮ ಸಲಹೆ ಕೇಳಿ, ಬಹಿರಂಗವಾಗಿ ಚರ್ಚೆ ಮಾಡೋಣ ಎಂದು ಈ ಸಭೆ ಕರೆದಿದ್ದೇನೆ. ನನಗೆ ನಿಮ್ಮ ಸಲಹೆ ಬೇಕು. ಗದ್ದಲ ಮಾಡಬೇಕೆಂದರೆ ಕಬ್ಬನ್ ಪಾರ್ಕ್ ಗೆ ಹೋಗಿ ಕುಳಿತುಕೊಳ್ಳಿ. ಇಲ್ಲಿ ಸ್ವಲ್ಪ ತಾಳ್ಮೆಯಿಂದಿರಿ’ ಎಂದು ಕುಮಾರಸ್ವಾಮಿ ಕೊಂಚ ಖಾರವಾಗಿಯೇ ಮನವಿ ಮಾಡಿದರು. ನಂತರ ರೈತ ನಾಯಕರ ಗದ್ದಲ ನಿಯಂತ್ರಣಕ್ಕೆ ಬಂತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments