Select Your Language

Notifications

webdunia
webdunia
webdunia
webdunia

ಉತ್ತರ ಕರ್ನಾಟಕ ಪ್ರತ್ಯೇಕ ಕೂಗಿಗೆ ಸಿಎಂ ಕುಮಾರಸ್ವಾಮಿ ಹೊಸ ತಂತ್ರ

ಉತ್ತರ ಕರ್ನಾಟಕ ಪ್ರತ್ಯೇಕ ಕೂಗಿಗೆ ಸಿಎಂ ಕುಮಾರಸ್ವಾಮಿ ಹೊಸ ತಂತ್ರ
ಬೆಂಗಳೂರು , ಬುಧವಾರ, 1 ಆಗಸ್ಟ್ 2018 (09:05 IST)
ಬೆಂಗಳೂರು: ಉತ್ತರ ಕರ್ನಾಟಕ ಅಭಿವೃಧ್ಧಿ ನಿರ್ಲಕ್ಷಿಸಿದ್ದಾರೆಂದು ಆರೋಪಿಸಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸುತ್ತಿರುವವರ ಸಮಾಧಾನಿಸಲು ಸಿಎಂ ಕುಮಾರಸ್ವಾಮಿ ಹೊಸ ತಂತ್ರ ಹೆಣೆದಿದ್ದಾರೆ.

ಇನ್ನು ಬೆಂಗಳೂರಿನಂತೆ ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿಯಾಗಿಸುವ ಬಗ್ಗೆ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕಕ್ಕೆ ಸೂಕ್ತ ಸ್ಥಾನ ಮಾನದ ಭರವಸೆ ಒದಗಿಸಿದ್ದಾರೆ.

ಮಾಜಿ ಸಚಿವ ಎಚ್ ಎಚ್ ಕೋನರೆಡ್ಡಿ ನೇತೃತ್ವದಲ್ಲಿ ಬಂದ ಹೋರಾಟಗಾರರೊಂದಿಗೆ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ ಈ ಭರವಸೆ ನೀಡಿದ್ದಾರೆ. ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸುವುದಿಲ್ಲ. ಬೆಳಗಾವಿಯಲ್ಲಿರುವ ಸುವರ್ಣ ಸೌಧದಲ್ಲಿ ಆಡಳಿತಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಿರಂತರವಾಗಿ ನಡೆಯಲು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಆ ರಾಹುಲ್ ಗಾಂಧಿಗೊಂದು ಹುಡುಗಿ ಸಿಗಲಪ್ಪಾ..! ಹೀಗೆ ಹೇಳಿದವರು ಯಾರು ಗೊತ್ತೇ?!