Publish Date: Wed, 06 Jun 2018 (11:03 IST)
Updated Date: Wed, 06 Jun 2018 (11:06 IST)
ಬೆಂಗಳೂರು: ಇಂದು ಸಮ್ಮಿಶ್ರ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಹಿನ್ನಲೆಯಲ್ಲಿ ಯಾರು ಯಾರಿಗೆ ಮಂತ್ರಿಗಿರಿ ಸಿಗುತ್ತದೆ ಎಂಬ ಪ್ರಶ್ನೆಗೆ ಸಿಎಂ ಕುಮಾರಸ್ವಾಮಿ ಮಧ್ಯಾಹ್ನ ರಾಜಭವನಕ್ಕೆ ಬನ್ನಿ ಎಲ್ಲಾ ಗೊತ್ತಾಗುತ್ತದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಪುಣ್ಯಸ್ಮರಣೆ ಆಚರಣೆ ಮಾಡುವುದರ ಮುಖಾಂತರ ಅವರ ಮಾರ್ಗದರ್ಶನದಂತೆ ಈ ಸಮ್ಮಿಶ್ರ ಸರ್ಕಾರ ಆರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.
ಈ ನಡುವೆ ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಯಾವುದೇ ಅಸಮಾಧಾನಗಳಿಲ್ಲ. ಎಲ್ಲಾ ಪ್ರಶ್ನೆಗಳಿಗೂ ಮಧ್ಯಾಹ್ನ 2 ಗಂಟೆಗೆ ರಾಜಭವನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬನ್ನಿ. ಗೊತ್ತಾಗುತ್ತದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.