Publish Date: Thu, 31 May 2018 (11:34 IST)
Updated Date: Thu, 31 May 2018 (11:35 IST)
ಬೆಂಗಳೂರು: ಆರ್ ಆರ್ ನಗರ ಚುನಾವಣೆಯಲ್ಲಿ ಕಾಂಗ್ರೆಸ್ ಬೃಹತ್ ಅಂತರದಿಂದ ಗೆಲ್ಲುವುದು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
‘ಆರ್ ಆರ್ ನಗರ ಚುನಾವಣೆ ಬಗ್ಗೆ ನಾವು ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಇಲ್ಲಿ ಬಿಜೆಪಿ ಗೆಲ್ಲಬಾರದು ಎಂದಷ್ಟೇ ನಾವು ಸೂಚನೆ ಕೊಟ್ಟಿದ್ದೆವು. ಅದೇ ಆಗಿದೆ. ಕಾಂಗ್ರೆಸ್ ಗೆದ್ದಿದೆ’ ಎಂದು ಸಿಎಂ ಕುಮಾರಸ್ವಾಮಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಹೇಳಿಕೆ ಕೊಟ್ಟಿದ್ದಾರೆ.
ಆರ್ ಆರ್ ನಗರ ಚುನಾವಣೆಯಲ್ಲಿ ಮುನಿರತ್ನ ಗೆಲುವಿನ ಸುದ್ದಿಯನ್ನು ಚುನಾವಣಾ ಆಯೋಗ ಘೋಷಣೆ ಮಾಡುವುದೊಂದೇ ಬಾಕಿ. ಇಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಮೂರನೇ ಸ್ಥಾನಕ್ಕಿಳಿದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.