ಬಸ್ ದರ ಹೆಚ್ಚಳ ಮಾಡಿ ಕ್ಷಣದಲ್ಲೇ ಸಿಎಂ ಕುಮಾರಸ್ವಾಮಿ ಆದೇಶ ಹಿಂಪಡೆದಿದ್ದರ ಕಾರಣವೇನು ಗೊತ್ತಾ?!

Webdunia
ಮಂಗಳವಾರ, 18 ಸೆಪ್ಟಂಬರ್ 2018 (09:01 IST)
ಬೆಂಗಳೂರು: ಗಣೇಶ ಹಬ್ಬದ ಬಳಿಕ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇ.18 ರಷ್ಟು ಹೆಚ್ಚಳ ಮಾಡಲು ಮೊದಲೇ ತೀರ್ಮಾನಿಸಿದಂತೆ ನಿನ್ನೆ ರಾತ್ರಿಯಿಂದ ಆದೇಶ ಜಾರಿಗೆ ತರಲಾಯಿತು. ಆದರೆ ಆದೇಶ ಹೊರಬಿದ್ದ ಕೆಲವೇ ಕ್ಷಣಗಳಲ್ಲಿ ಅದನ್ನು ಸಿಎಂ ಕುಮಾರಸ್ವಾಮಿ ತಡೆಹಿಡಿದಿದ್ದಾರೆ.

ತೈಲ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ನಷ್ಟ ಸರಿದೂಗಿಲು ಬಸ್ ದರ ಹೆಚ್ಚಳ ಅನಿವಾರ್ಯ ಎಂದು ಸಾರಿಗೆ ಸಚಿವ ತಮ್ಮಣ್ಣ ಸ್ಪಷ್ಟನೆ ನೀಡಿದ್ದರು. ಆದರೆ ನಿನ್ನೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ದರ ಕಡಿತಗೊಳಿಸಿ ಪ್ರತೀ ಲೀ.ಗೆ ತೈಲ ಬೆಲೆ 2 ರೂ. ಗಳಷ್ಟು ರಾಜ್ಯ ಸರ್ಕಾರ ಇಳಿಕೆ ಮಾಡಿತ್ತು.

ಇದರ ಬೆನ್ನಲ್ಲೇ ದರ ಏರಿಕೆ ಸದ್ಯಕ್ಕೆ ಬೇಡ. ಆದೇಶ ತಡೆಹಿಡಿಯಿರಿ ಎಂದು ಸಿಎಂ ಎಚ್ ಡಿಕೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈಗ ಪೆಟ್ರೋಲ್ ದರ ಇಳಿಕೆ ಮಾಡಿಯೂ ಬಸ್ ದರ ಹೆಚ್ಚಳ ಮಾಡಿದರೆ ವಿಪಕ್ಷ ಬಿಜೆಪಿ ಇದನ್ನೇ ಟೀಕಾಸ್ತ್ರವಾಗಿ ಬಳಸಬಹುದು ಎಂಬ ಕಾರಣಕ್ಕೆ ಸಿಎಂ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments