Webdunia - Bharat's app for daily news and videos

Install App

ಬಸ್ ದರ ಹೆಚ್ಚಳ ಮಾಡಿ ಕ್ಷಣದಲ್ಲೇ ಸಿಎಂ ಕುಮಾರಸ್ವಾಮಿ ಆದೇಶ ಹಿಂಪಡೆದಿದ್ದರ ಕಾರಣವೇನು ಗೊತ್ತಾ?!

Webdunia
ಮಂಗಳವಾರ, 18 ಸೆಪ್ಟಂಬರ್ 2018 (09:01 IST)
ಬೆಂಗಳೂರು: ಗಣೇಶ ಹಬ್ಬದ ಬಳಿಕ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇ.18 ರಷ್ಟು ಹೆಚ್ಚಳ ಮಾಡಲು ಮೊದಲೇ ತೀರ್ಮಾನಿಸಿದಂತೆ ನಿನ್ನೆ ರಾತ್ರಿಯಿಂದ ಆದೇಶ ಜಾರಿಗೆ ತರಲಾಯಿತು. ಆದರೆ ಆದೇಶ ಹೊರಬಿದ್ದ ಕೆಲವೇ ಕ್ಷಣಗಳಲ್ಲಿ ಅದನ್ನು ಸಿಎಂ ಕುಮಾರಸ್ವಾಮಿ ತಡೆಹಿಡಿದಿದ್ದಾರೆ.

ತೈಲ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ನಷ್ಟ ಸರಿದೂಗಿಲು ಬಸ್ ದರ ಹೆಚ್ಚಳ ಅನಿವಾರ್ಯ ಎಂದು ಸಾರಿಗೆ ಸಚಿವ ತಮ್ಮಣ್ಣ ಸ್ಪಷ್ಟನೆ ನೀಡಿದ್ದರು. ಆದರೆ ನಿನ್ನೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ದರ ಕಡಿತಗೊಳಿಸಿ ಪ್ರತೀ ಲೀ.ಗೆ ತೈಲ ಬೆಲೆ 2 ರೂ. ಗಳಷ್ಟು ರಾಜ್ಯ ಸರ್ಕಾರ ಇಳಿಕೆ ಮಾಡಿತ್ತು.

ಇದರ ಬೆನ್ನಲ್ಲೇ ದರ ಏರಿಕೆ ಸದ್ಯಕ್ಕೆ ಬೇಡ. ಆದೇಶ ತಡೆಹಿಡಿಯಿರಿ ಎಂದು ಸಿಎಂ ಎಚ್ ಡಿಕೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈಗ ಪೆಟ್ರೋಲ್ ದರ ಇಳಿಕೆ ಮಾಡಿಯೂ ಬಸ್ ದರ ಹೆಚ್ಚಳ ಮಾಡಿದರೆ ವಿಪಕ್ಷ ಬಿಜೆಪಿ ಇದನ್ನೇ ಟೀಕಾಸ್ತ್ರವಾಗಿ ಬಳಸಬಹುದು ಎಂಬ ಕಾರಣಕ್ಕೆ ಸಿಎಂ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಊಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments