Webdunia - Bharat's app for daily news and videos

Install App

ಖಾತೆ ಹಂಚಿಕೆ ಗೊಂದಲ ಪರಿಹಾರಕ್ಕೆ ದೇವೇಗೌಡರ ಮೊರೆ ಹೋದ ಸಿಎಂ ಎಚ್ ಡಿಕೆ

Webdunia
ಸೋಮವಾರ, 28 ಮೇ 2018 (09:14 IST)
ಬೆಂಗಳೂರು: ಅತ್ತ ಕಾಂಗ್ರೆಸ್ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿರುವುದಲ್ಲದೆ, ಸಚಿವರ ಪಟ್ಟಿಯನ್ನೂ ಅಂತಿಮಗೊಳಿಸದೆ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಜೆಡಿಎಸ್ ಗೆ ತಲೆನೋವಾಗಿದೆ.

ಸಿಎಂ ಹುದ್ದೆ ಬಿಟ್ಟುಕೊಟ್ಟ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಮುಖ ಖಾತೆಗಳಿಗೆ ಪಟ್ಟು ಹಿಡಿದಿದೆ ಎನ್ನಲಾಗಿದೆ. ಆದರೆ ಜೆಡಿಎಸ್ ಕೂಡಾ ಪ್ರಮುಖ ಖಾತೆಗಳನ್ನು ಬಿಟ್ಟುಕೊಡಲು ತಯಾರಿಲ್ಲ. ಇದರಿಂದಾಗಿ ಖಾತೆ ಹಂಚಿಕೆ ಕಗ್ಗಂಟಾಗಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಹಾಗೂ ತಮ್ಮ ತಂದೆ ದೇವೇಗೌಡರನ್ನು ಭೇಟಿಯಾಗಿ ನಿನ್ನೆ ರಾತ್ರಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಖಾತೆ ಹಂಚಿಕೆ ಕುರಿತಂತೆ ದೇವೇಗೌಡರ ಸಲಹೆ ಪಡೆದಿದ್ದಾರೆ. ಇಂದು ಕುಮಾರಸ್ವಾಮಿ ದೆಹಲಿಗೆ ತೆರಳಿ ಪ್ರಧಾನಿ ಮೋದಿ ಭೇಟಿಯಾಗುವ ಕಾರ್ಯಕ್ರಮವಿದೆಯಾದರೂ ಈ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್‍ ಜತೆ ಚರ್ಚೆ ನಡೆಸುವ ಸಾಧ್ಯತೆ ಕಡಿಮೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments