Webdunia - Bharat's app for daily news and videos

Install App

ಇಂದು ಸಿಎಂ ಕುಮಾರಸ್ವಾಮಿಗೆ ವಿಶ್ವಾಸ ಪರೀಕ್ಷೆ

Webdunia
ಶುಕ್ರವಾರ, 25 ಮೇ 2018 (09:01 IST)
ಬೆಂಗಳೂರು: ಮೊನ್ನೆಯಷ್ಟೇ ಅಸ್ಥಿತ್ವಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ಇಂದು ವಿಶ್ವಾಸಮತ ಯಾಚನೆಯ ಅಗ್ನಿಪರೀಕ್ಷೆ ಎದುರಾಗಿದೆ.

ಆದರೆ ಸಾಕಷ್ಟು ಸಂಖ್ಯಾಬಲ ಹೊಂದಿರುವುದರಿಂದ ಸಿಎಂ ಕುಮಾರಸ್ವಾಮಿಗೆ ಸೋಲಿನ ಭೀತಿ ಇಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳ ಸದಸ್ಯರಲ್ಲದೆ ಪಕ್ಷೇತರರ ಬೆಂಬಲವೂ ಸಮ್ಮಿಶ್ರ ಸರ್ಕಾರಕ್ಕಿದೆ. ಹೀಗಾಗಿ 224 ಸದಸ್ಯ ಬಲವುಳ್ಳ ಸದನದಲ್ಲಿ ಬಹುಮತ ಸಾಬೀತಿಗೆ ಅಗತ್ಯವಿರುವ 111 ಸದಸ್ಯರ ಬೆಂಬಲ ಸರ್ಕಾರಕ್ಕೆ ಸುಲಭವಾಗಿ ಸಿಗಲಿದೆ. ಈಗಾಗಲೇ ಎರಡೂ ಪಕ್ಷಗಳ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದ್ದು, ಅಡ್ಡಮತದಾನದ ಭೀತಿಯೂ ಇಲ್ಲ.

ಇಂದು ಮಧ್ಯಾಹ್ನ 12.15 ರ ನಂತರ ಕಲಾಪ ನಡೆಯಲಿದ್ದು, ಸಿಎಂ ಕುಮಾರಸ್ವಾಮಿ ಪ್ರಸ್ತಾವನೆ ಸಲ್ಲಿಸಿ ಮತಕ್ಕೆ ಹಾಕಲಿದ್ದಾರೆ. ಬಳಿಕ ವಿಶ್ವಾಸಮತ ನಡೆಯಲಿದೆ. ಇದಕ್ಕೂ ಮೊದಲು ಸ್ಪೀಕರ್ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments