ವಿಶ್ವಾಸ ಮತದಲ್ಲಿ ಪಾಸಾದ ದೋಸ್ತಿ ಸರ್ಕಾರ: ಬಿಜೆಪಿಯಿಂದ ಬಹಿಷ್ಕಾರ

Webdunia
ಶುಕ್ರವಾರ, 25 ಮೇ 2018 (15:45 IST)
ಬೆಂಗಳೂರು: ಅಂತೂ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರಕ್ಕೆ ಸದನದ  ಒಪ್ಪಿಗೆ ಸಿಕ್ಕಿದೆ. ವಿಶ್ವಾಸ ಮತ ಪ್ರಕ್ರಿಯೆಯಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಗೆಲುವಾಗಿದೆ.

ಸ್ಪೀಕರ್ ಆಗಿ ಶಾಸಕ ರಮೇಶ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಅದಾದ ಬಳಿಕ ನೂತನ ಸ್ಪೀಕರ್ ಗೆ ಅಭಿನಂದನಾ ಭಾಷಣಗಳನ್ನು ವಿವಿಧ ಪಕ್ಷದ ನಾಯಕರು ನಡೆಸಿದರು.

ಸ್ಪೀಕರ್ ಕೆಲ ನಿಮಿಷ ಮಾತನಾಡಿದ ಬಳಿಕ ಸಿಎಂ ಕುಮಾರಸ್ವಾಮಿ ಪ್ರಸ್ತಾವನೆ ಸಲ್ಲಿಸಲು ಅವಕಾಶ ನೀಡಲಾಯಿತು. ಪ್ರಸ್ತಾವನೆ ನಂತರ ಚರ್ಚೆಗೆ ಅವಕಾಶ ನೀಡಲಾಯಿತು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ವಿಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಕುಮಾರಸ್ವಾಮಿ ಮತ್ತು ಜೆಡಿಎಸ್ ವಿರುದ್ಧ ತಿರುಗೇಟು ನೀಡಿದರು.

ಇದಾದ ಬಳಿಕ ರೈತರ ಸಾಲ ಸಂಪೂರ್ಣ ಮನ್ನಾ ಮಾಡದಿದ್ದರೆ ರಾಜ್ಯವ್ಯಾಪಿ ಸೋಮವಾರ ಬಂದ್ ಗೆ ಕರೆ ಮಾಡುವುದಾಗಿ ಹೇಳಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಕಲಾಪ ಬಹಿಷ್ಕರಿಸಿ ಹೊರ ನಡೆದರು.

ಇದರ ಬಳಿಕ ಸಿಎಂ ಕುಮಾರಸ್ವಾಮಿ ಯಡಿಯೂರಪ್ಪ ಆರೋಪಗಳಿಗೆ ಉತ್ತರ ನೀಡಿದರು. ಆದರೆ ಅಷ್ಟರಲ್ಲಿ ಸದನದಲ್ಲಿ ಬಿಜೆಪಿಯ ಯಾವುದೇ ಸದಸ್ಯರೂ ಇರಲಿಲ್ಲ.  ಈ ವೇಳೆ ವಿಶ್ವಾಸ ಮತ ಪ್ರಕ್ರಿಯೆ ನಡೆದಿದ್ದು, ಸರ್ಕಾರದ ಪರವಾಗಿ ಮತಗಳು ಬಂದು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಮೊದಲ ಪರೀಕ್ಷೆಯಲ್ಲಿ ಗೆದ್ದು ಅಧಿಕೃತವಾಗಿ ಸರ್ಕಾರಕ್ಕೆ  ಅಸ್ಥಿತ್ವಕ್ಕೆ ಬಂದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಸಿದವನ ಹೊಟ್ಟೆಗೆ ಹೊಡೆದ ಪಡೆದ ದುಡ್ಡು ಈತನಿಗೆ ದಕ್ಕುತ್ತಾ: ದುಡ್ಡು ತಗೊಂಡು ಊಟ ಕೊಡದ ವ್ಯಾಪಾರಿ Video

ಸೂರಿಕುಮೇರು ಕೆ.ಗೋವಿಂದ ಭಟ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಯುದ್ಧದ ನಡುವೆಯೂ ಭಾರತಕ್ಕೆ ಗುಡ್ ನ್ಯೂಸ್ ಕೊಟ್ಟ ಇರಾನ್

ನಡಿಯೋ ಮನೆಗೆ...ಕುಡಿದು ಫುಲ್ ಟೈಟ್ ಆಗಿದ್ದ ಮಾಲಿಕನನ್ನು ತಾನೇ ಮನೆಗೆ ಕರೆದೊಯ್ದ ಎತ್ತು Video

ಮುಂದಿನ ಸುದ್ದಿ
Show comments