Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಗೆ ಸಿಎಂ ಎಚ್ ಡಿಕೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ ಪ್ರತಿ

ಪ್ರಧಾನಿ ಮೋದಿಗೆ ಸಿಎಂ ಎಚ್ ಡಿಕೆ ಬರೆದ ಪತ್ರದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ ಪ್ರತಿ
ಬೆಂಗಳೂರು , ಮಂಗಳವಾರ, 14 ಆಗಸ್ಟ್ 2018 (09:13 IST)
ಬೆಂಗಳೂರು: ಪ್ರತೀ ವರ್ಷ ಬೆಂಗಳೂರಿನಲ್ಲಿ ನಡೆಯುವ ಏರ್ ಶೋ ಈ ಬಾರಿ ಲಕ್ನೋಗೆ ಸ್ಥಳಾಂತರಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಲು ಮುಂದಾಗಿದೆ.

ಈಗಾಗಲೇ ವಿಪಕ್ಷ ಬಿಜೆಪಿ ಮತ್ತು ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ನಡುವೆ ಈ ವಿಚಾರ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜಕೀಯ ಲಾಭಕ್ಕಾಗಿ ಕೇಂದ್ರ ಏರ್ ಶೋ ಸ್ಥಳಾಂತರಿಸುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸುತ್ತಿದೆ.

webdunia
ಇದರ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಪ್ರಧಾನಿ ಮೋದಿಗೆ ಏರ್ ಶೋ ಸ್ಥಳಾಂತರಿಸದಂತೆ ಪತ್ರ ಬರೆದಿದ್ದಾರೆ. ಕಳೆದ ಕೆಲವಾರು ವರ್ಷಗಳಿಂದ ಭಾರತದ ಮಿಲಿಟರಿ ಚಟುವಟಿಕೆಗಳಿಗೆ ಪ್ರಮುಖ ಕೇಂದ್ರವಾಗಿರುವ ಬೆಂಗಳೂರಿನಿಂದ ಏರ್ ಶೋ ಯಾವುದೇ ಕಾರಣಕ್ಕೂ ಸ್ಥಳಾಂತರಿಸದಂತೆ ಸಿಎಂ ಪತ್ರದಲ್ಲಿ ಮನವಿ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಈ ಕುರಿತಾಗಿ ತಾವು ಮಧ್ಯಸ್ಥಿಕೆ ವಹಿಸಬೇಕು ಎಂದು ಪ್ರಧಾನಿ ಮೋದಿಗೆ ಸಿಎಂ ಎಚ್ ಡಿಕೆ ಆಗ್ರಹಿಸಿದ್ದಾರೆ.

ಒಂದೆಡೆ ರಾಜ್ಯ ಬಿಜೆಪಿ ಅಧ್ಯಕ್ಷ ತಾವೂ ಕೂಡಾ ಕೇಂದ್ರದ ಮೇಲೆ ಈ ಬಗ್ಗೆ ಒತ್ತಡ ಹೇರುವುದಾಗಿ ಹೇಳಿಕೊಂಡಿದ್ದಾರೆ. ಹಾಗಿದ್ದರೂ ಲಕ್ನೋದಲ್ಲಿ ಏರ್ ಶೋ ನಡೆಸಲು ಈಗಾಗಲೇ ತಯಾರಿ ನಡೆದಿರುವುದು ರಾಜ್ಯದ ಆತಂಕಕ್ಕೆ ಕಾರಣವಾಗಿದೆ.







ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿಗೆ ಹೆಣ್ಣು ನೋಡ್ತಾರಂತೆ ಅಮೆರಿಕಾ ಅಧ್ಯಕ್ಷ ಟ್ರಂಪ್!