Webdunia - Bharat's app for daily news and videos

Install App

ನಿರಾಶ್ರಿತರ ಕೇಂದ್ರಕ್ಕೆ ಬಂದ ಕೇರಳ ಸಿಎಂ ಪಿನರಾಯ್ ವಿಜಯನ್ ಸಂತ್ರಸ್ತರಿಂದ ಏನೆಲ್ಲಾ ಮಾತು ಕೇಳಬೇಕಾಗಿ ಬಂತು ನೋಡಿ!

Webdunia
ಶುಕ್ರವಾರ, 24 ಆಗಸ್ಟ್ 2018 (08:05 IST)
ತಿರುವನಂತಪುರಂ: ಕೇರಳದಲ್ಲಿ ಪ್ರವಾಹದಿಂದಾಗಿ ಜನ ಜೀವನ ಸಂಕಷ್ಟ ಅನುಭವಿಸುತ್ತಿರುವುದು ಎರಡು ವಾರಗಳೇ ಆಗಿವೆ. ಹಲವರು ಮನೆ ಮಠ ಕಳೆದುಕೊಂಡು ಗಂಜಿ ಕೇಂದ್ರ ಸೇರುವಂತಾಗಿದೆ.
 

ಆದರೆ ಇಷ್ಟು ದಿನಗಳ ಬಳಿಕ ಸಿಎಂ ಪಿನರಾಯ್ ವಿಜಯನ್ ಗಂಜಿ ಕೇಂದ್ರಗಳಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆ ಬಗ್ಗೆ ವಿಚಾರಿಸಿದ್ದಾರೆ. ಇದನ್ನು ನೋಡಿ ಅಲ್ಲಿದ್ದ ಸಂತ್ರಸ್ತರ ಸಹನೆಯ ಕಟ್ಟೆಯೊಡೆದಿದೆ.

ಕೆಲವರು ಇಷ್ಟು ತಡವಾಗಿ ಬಂದಿದ್ದಕ್ಕೆ ಕ್ಲಾಸ್ ತೆಗೆದುಕೊಂಡರೆ ಇನ್ನು ಕೆಲವರು ಗಂಜಿ ಕೇಂದ್ರದಲ್ಲಿ ಆಹಾರ ವ್ಯವಸ್ಥೆ, ಶೌಚಾಲಯ ಅವ್ಯವಸ್ಥೆ, ಅಶುದ್ಧ ಕುಡಿಯುವ ನೀರು ಮತ್ತು ಗಂಜಿ ಕೇಂದ್ರಗಳಲ್ಲಿ ಹಾವು ಮತ್ತಿತರ ಪ್ರಾಣಿಗಳ ಉಪಟಳಗಳ ಬಗ್ಗೆ ಸಿಎಂ ಪಿನರಾಯ್ ವಿಜಯನ್ ರನ್ನು ತರಾಟೆಗೆ ತೆಗೆದುಕೊಂಡರು.

ನಾಮಕಾವಸ್ಥೆಗಾಗಿ ಇಲ್ಲಿಗೆ ಭೇಟಿ ನೀಡುತ್ತಿದ್ದಾರಷ್ಟೇ. ಭೇಟಿ ನೀಡಿದ್ದೇನೆ ಎಂದು ತೋರಿಸಿಕೊಳ‍್ಳುವುದಕ್ಕಷ್ಟೇ ಈ ಭೇಟಿ ಎಂದು ಗಂಜಿ ಕೇಂದ್ರದಲ್ಲಿನ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂತೂ ಗಂಇ ಕೇಂದ್ರಗಳಿಗೆ ಹೋಗಿ ಸಮಸ್ಯೆ ಆಲಿಸಲು ಹೋದ ಸಿಎಂಗೆ ಜನ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments