ಸಿಎಂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಆಶೀರ್ವಾದ ಸಿಕ್ಕಿಲ್ಲ : ಹೆಚ್‌ಡಿಕೆ

Webdunia
ಶನಿವಾರ, 21 ಏಪ್ರಿಲ್ 2018 (17:08 IST)
ಸಿಎಂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಆಶೀರ್ವಾದ ಸಿಕ್ಕಿಲ್ಲ. ಆದ್ದರಿಂದ ಬನಶಂಕರಿ ದೇವಿ ಆಶಿರ್ವಾದ ಪಡೆಯಲು ಬರುತ್ತಿದ್ದಾರೆ ಎಂದು ಮಾಜಿ ಸಿಎಮ್ ಹೆಚ್. ಡಿ‌. ಕುಮಾರಸ್ವಾಮಿ ಲೇವಡಿ‌ ಮಾಡಿದರು. 
ಬಾಗಲಕೋಟೆ ‌ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಹೆಚ್ ಡಿ ಕೆ,  ಸಿಎಮ್  ಬನಶಂಕರಿ ಆಶೀರ್ವಾದ ಪಡೆಯೋಕೆ ಬರುತ್ತಿದ್ದಾರೆ. ಆದರೆ ಬನಶಂಕರಿ ದೇವಿ ಆಶೀರ್ವಾದ ಕೂಡ ಸಿದ್ದರಾಯ್ಯಗೆ ಧಕ್ಕೋದಿಲ್ಲ. ಬಾದಾಮಿ ಮತ್ತು ಚಾಮುಂಡೇಶ್ವರಿ ಎರಡು ಕ್ಷೇತ್ರದಲ್ಲಿ ಸಿಎಮ್ ಗೆ ಸೋಲು ಖಚಿತ ಎಂದರು.
 
 ಇನ್ನು ಬಿಎಸ್ ವೈ ಮತ್ತು ಸಿದ್ದರಾಮಯ್ಯ  ಮುಂದಿನ ಸಿಎಮ್ ನಾನೆ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುತ್ತಿದ್ದಾರೆ. ನಾನು ಸಿಎಮ್ ಆಗುತ್ತೇನೆ ಎಂದು ಎಲ್ಲೂ ಹೇಳಿಲ್ಲ ಜನರ ಮುಂದೆ ಮನವಿ ಮಾಡಿದ್ದೇನೆ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದೇನೆ ಎಂದರು.
 
ನಮ್ಮ ಅಭ್ಯರ್ಥಿ ಹನುಮಂತ ಮಾವಿನಮರದ ಜನಸಾಮಾನ್ಯರ ಮನಸ್ಸಿನಲ್ಲಿದ್ದಾರೆ ಎಂದ ಹೆಚ್ ಡಿ ಕೆ, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಯಾರೇ ಬಂದರೂ ನಮ್ಮ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. 
 
ಇನ್ನು ಬಾದಾಮಿ ಜೆಡಿಎಸ್ ಅಭ್ಯರ್ಥಿ ಹನುಮಂತ ಮಾವಿನಮರದ ಕೆಂಪಯ್ಯ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಹೆಚ್ ಡಿ ಕೆ,ನಮ್ಮ ಅಭ್ಯರ್ಥಿ ಕೆಂಪಯ್ಯ ಜೊತೆ ಸಂಪರ್ಕ ಹೊಂದಿಲ್ಲ.ಹಾಗೇನಾದರೂ ಸಂಪರ್ಕ ಹೊಂದಿದ್ದೆ ಆದರೆ ಅದು ಸಿದ್ದರಾಮಯ್ಯನವರನ್ನು ಮುಗಿಸೋದಕ್ಕೆ ಕೆಂಪಯ್ಯ ಮಾಡಿದ ಪ್ಲಾನ್ ಆಗಿರಬಹುದು.ಕೆಂಪಯ್ಯ ಬಹಳ ಜನರ ಕಥೆ ಮುಗಿಸಿದ್ದಾರೆ ಎಂದರು .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments