Webdunia - Bharat's app for daily news and videos

Install App

ಸಿಎಂರಿಂದ ಲಕ್ಷ ಲಕ್ಷ ರೂ ನೀಡಿ ಗ್ರಾ.ಪಂ ಸದಸ್ಯರ ಖರೀದಿ: ಬಿಜೆಪಿ

Webdunia
ಮಂಗಳವಾರ, 3 ಏಪ್ರಿಲ್ 2018 (13:33 IST)
ಸಿಎಂ ಸಿದ್ದರಾಮಯ್ಯ ಲಕ್ಷ ಲಕ್ಷ ಹಣ ನೀಡಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಖರೀದಿಸುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಆರೋಪಿಸಿದ್ದಾರೆ.  
ಮೈಸೂರಿನಲ್ಲಿ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಗಂಭೀರ ಆರೋಪ ಮಾಡಿದ್ದು, ಸಿದ್ದರಾಮಯ್ಯ ರೆಸಾರ್ಟ್ ನಲ್ಲಿ ಕುಳಿತು ಏನೇನ್ ಮಾಡಿದ್ರು ಅಂತ ಗೊತ್ತಾಗಿದೆ.ಗ್ರಾಮ ಪಂಚಾಯಿತಿ ಸದಸ್ಯರಿಗೆ ಲಕ್ಷಾಂತರ ರೂ. ನೀಡಿ ಖರೀದಿ ಮಾಡುತ್ತಿದ್ದಾರೆ. ಹಣ ಹಂಚೋದು ಚುನಾವಣೆಯ ಒಂದು ಭಾಗ. ಹಣದಿಂದಲೇ ಚುನಾವಣೆ ಗೆಲ್ಲೋದಿಕ್ಕೆ ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.‌
 
ಸಿದ್ದರಾಮಯ್ಯ ಅವರನ್ನು ಸೋಲಿಸೋದು ನನ್ನ ಗುರಿ ಅಂತ ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ. ಹೇಗೆ ಸೋಲಿಸುತ್ತೇವೆ ಅಂತ ಹೇಳೋಕಾಗುತ್ತ ?ಚಾಮುಂಡೇಶ್ವರಿ ಕ್ಷೇತ್ರದ ರಣತಂತ್ರದ ಗುಟ್ಟು ಬಿಟ್ಟುಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.
 
ಬಿಜೆಪಿ ರಾಷ್ಟ್ರೀಯ ಪಕ್ಷ. ನಾವು ಅಭ್ಯರ್ಥಿ ಹಾಕಲೇ ಬೇಕಾಗುತ್ತೆ‌. ಅಭ್ಯರ್ಥಿ ಹಾಕುತ್ತೇವೆ. ಯಾರು ಗೆಲ್ಲುತ್ತಾರೆ ಅಂತ ಈಗ ಹೇಳಲು ಸಾಧ್ಯವೇ ?ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಪ್ರಶ್ನಿಸಿದ್ದಾರೆ.
 
ವರುಣ ಕ್ಷೇತ್ರಕ್ಕೆ ವಿಜಯೇಂದ್ರ ಅಲ್ಲ, ಅವರಪ್ಪ ಬರಲಿ ಎಂಬ ಸಿಎಂ ಹೇಳಿಕೆ ವಿಚಾರ. ಒಬ್ಬ ಮುಖ್ಯಮಂತ್ರಿ ಬಳಸುವ ಭಾಷೆಯೇ ಅದು ?ಚುನಾವಣೆ ಅಂತ ಮೇಲೆ ಯಾರಾದರೂ ಸ್ಪರ್ಧಿಸಲಿ ಅಂತ ಹೇಳಬಹುದಿತ್ತು. 
 
ಆದ್ರೆ ಸಿದ್ದರಾಮಯ್ಯ ಮಾತೆತ್ತಿದರೆ ಅವರಪ್ಪ ಬರಲಿ, ಅವರಮ್ಮ ಬರಲಿ, ಅವರಪ್ಪನಾಣೆ ಗೆಲ್ಲೋದಿಲ್ಲ ಎನ್ನುವ ಪದ ಬಳಕೆ ಮಾಡ್ತಾರೆ. ಈ ಬಾರಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರ ಹಾವ ಭಾವವೇ ಮುಳುವಾಗುತ್ತೆ. ಮೈಸೂರಿನಲ್ಲಿ ಮಾಜಿ‌ ಸಚಿವ ವಿ. ಶ್ರೀನಿವಾಸ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments