Publish Date: Tue, 15 May 2018 (09:56 IST)
Updated Date: Tue, 15 May 2018 (10:47 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಆರಂಭಿಕ ಟ್ರೆಂಡ್ ನೋಡಿದರೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಮೇಲೆ ಮತದಾರ ಮುನಿಸಿಕೊಂಡಂತೆ ಕಾಣುತ್ತಿದೆ.
ಚಾಮುಂಡೇಶ್ವರಿಯಲ್ಲಿ ಸ್ವತಃ ಸಿದ್ದರಾಮಯ್ಯ ಸೋಲಿನತ್ತ ಮುಖ ಮಾಡಿದ್ದಾರೆ. ಅವರ ಆಪ್ತ ಸಚಿವರಾದ ಎಚ್ ಸಿ ಮಹದೇವಪ್ಪ, ಎಚ್ ಆಂಜನೇಯ, ಕೃಷ್ಣ ಬೈರೇಗೌಡ, ವಿನಯ್ ಕುಲಕರ್ಣಿ, ಬಂಟ್ವಾಳದಲ್ಲಿ ರಮಾನಾಥ ರೈ, ಉಮಾಶ್ರೀ, ಆರ್ ವಿ ದೇಶಪಾಂಡೆ, ಸಂತೋಷ್ ಲಾಡ್, ಶ್ಯಾಮನೂರು ಶಿವಶಂಕರಪ್ಪ ಹಿನ್ನಡೆ ಅನುಭವಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ