Publish Date: Wed, 25 Apr 2018 (07:15 IST)
Updated Date: Wed, 25 Apr 2018 (12:20 IST)
ಬೆಂಗಳೂರು: ಅತ್ತ ಜೆಡಿಎಸ್ ವರಿಷ್ಠ ದೇವೇಗೌಡ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಮೈತ್ರಿ ಇಲ್ಲ ಎಂದರು, ಇತ್ತ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಸಾಧ್ಯವಿಲ್ಲ ಎಂದಿದ್ದಾರೆ.
ಇತ್ತ ಚುನಾವಣಾ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎನ್ನುತ್ತಿವೆ. ಇದರಿಂದಾಗಿ ಸಮೀಕ್ಷೆಗಳು ನಿಜವಾದರೆ ರಾಜ್ಯದಲ್ಲಿ ಯಾವ ಸರ್ಕಾರ ಅಧಿಕಾರ ಹಿಡಿಯಬಹುದು ಎಂಬ ಕುತೂಹಲ ರಾಜ್ಯದ ಜನರದ್ದು.
‘ನಾವು ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಮಾಡಲ್ಲ. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.