ಸಿಎಂ ಪಾಪದ ಮೂಟೆ ಹೆಚ್ಚಿದೆ, ಎಲ್ಲೇ ಹೋದ್ರೂ ಸೋಲು ಗ್ಯಾರಂಟಿ: ಶ್ರೀರಾಮುಲು

Webdunia
ಶುಕ್ರವಾರ, 27 ಏಪ್ರಿಲ್ 2018 (14:15 IST)
ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ, ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಸಿಎಂಗೆ ಎರಡೂ ಕ್ಷೇತ್ರದಲ್ಲೂ ಸೋಲಿನ ಭೀತಿ ಇದ್ದು, ಸಿಎಂ ಎಲ್ಲೇ ಹೋದ್ರೂ ಸೋಲು ಕಟ್ಟಿಟ್ಟದ್ದೇ ಎಂದು ಸಂಸದ ಬಿ.ಶ್ರೀರಾಮುಲು ವ್ಯಂಗ್ಯವಾಡಿದ್ರು.
ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರದ ಗುಳೇದಗುಡ್ಡ ಪಟ್ಟಣಕ್ಕೆ ಭೇಟಿ ನೀಡಿ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜಶೇಖರ ಶೀಲವಂತರ ನಿವಾಸಕ್ಕೆ ಭೇಟಿ ನೀಡಿದ್ರು.
 
 ಈ ವೇಳೆ ಬಾದಾಮಿ ಮತಕ್ಷೇತ್ರದಲ್ಲಿ ಅಸಮಾಧಾನಗೊಂಡಿದ್ದ ನಾಯಕರೊಂದಿಗೆ ಮಾತುಕತೆ ನಡೆಸಿ ಅಸಮಾಧಾನ ಶಮನಗೊಳಿಸಿ, ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯೋದಾಗಿ ಹೇಳಿದ್ರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ಧಾಳಿ ನಡೆಸಿದ ಶ್ರೀರಾಮುಲು ನೀನೆ ಎಲ್ಲೇ ಹೋದ್ರೂ ಸೋಲು ಗ್ಯಾರಂಟಿ ಎಂದ್ರು.
 
 ಇನ್ನು ಸಿದ್ದರಾಮಯ್ಯನವರ ಜಾತಿ ಲೆಕ್ಕಾಚಾರ ಇಲ್ಲಿ ನಡೆಯೋದಿಲ್ಲ ಎಂದ ಅವರು, ಜನಾರ್ಧನ ರೆಡ್ಡಿ ಅವರು ಪ್ರಚಾರಕ್ಕೆ ಬರೋದು ಗೊತ್ತಿಲ್ಲ, ಸಿದ್ದರಾಮಯ್ಯ ತಮ್ಮ ಆಡಳಿತ ಅವಧಿಯಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಮಾಡಲಿಲ್ಲ, ಮಾಡಿದ್ರೆ ಜನ್ರು ಕೆಂಪು ಹಾಸಿಗೆ ಹಾಸಿ ಕರೆಯುತ್ತಿದ್ದರು. ಹೀಗಾಗಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಮತ್ತು ಬಾದಾಮಿಯಲ್ಲಿ ಸೋಲು ಅನುಭವಿಸಲಿದ್ದಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ಪಾಪ ಎಂದು ಟರ್ಕಿಗೆ ಸಹಾಯ ಮಾಡಿತ್ತು ಭಾರತ: ಆದರೆ ಈಗ ಟರ್ಕಿ ಮಾಡುತ್ತಿರೋದು ಏನು

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ಮುಂದಿನ ಸುದ್ದಿ
Show comments