Publish Date: Wed, 23 Feb 2022 (08:57 IST)
Updated Date: Wed, 23 Feb 2022 (09:08 IST)
ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ ಮಾತ್ರ ಹೆಚ್ಚಾಗಬೇಕು. ಇವತ್ತು ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರ ಸಂಬಳ, ಭತ್ಯೆ ಹೆಚ್ಚಳ ಮಾಡಿಕೊಂಡಿದ್ದಾರೆ.
ಕೋವಿಡ್ ಕಾರಣಕ್ಕಾಗಿ ಹಲವು ಇಲಾಖೆಗಳಲ್ಲಿ ಹಣ ಕಡಿತ ಮಾಡಿದ್ದ ಸರ್ಕಾರ,
ಕೆಲ ಯೋಜನೆಗಳ ಅನುದಾನವನ್ನೂ ಕೂಡ ಕಡಿತಗೊಳಿಸಿತ್ತು. ದುಂದು ವೆಚ್ಚ ಮಾಡಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡಿದ ದಿನವೇ ಘೋಷಣೆ ಮಾಡಿದ್ದರು.
ಆದರೆ ಈಗ ಸಚಿವರು, ಮುಖ್ಯಮಂತ್ರಿಗಳ ಸಂಬಳ ಹೆಚ್ಚಳಕ್ಕೆ ಬಿಲ್ ತಂದು ಅಂಗೀಕಾರ ಪಡೆದುಕೊಂಡ ಸರ್ಕಾರದ ನಡೆ ಬಗ್ಗೆ ಸಾರ್ವಜನಿಕವಾಗಿ ಟೀಕೆ ವ್ಯಕ್ತವಾಗಿದೆ.