Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ಇಂದು ಮಾಡಲಿರುವ ಒಂದು ಆದೇಶದ ಮೇಲೆ ಸಾವಿರಾರು ಜನರ ಭವಿಷ್ಯವಿದೆ!

Webdunia
ಸೋಮವಾರ, 18 ಮೇ 2020 (09:21 IST)
ಬೆಂಗಳೂರು: ಲಾಕ್ ಡೌನ್ 4 ನಿಯಮ ಇಂದಿನಿಂದ ಜಾರಿಗೆ ಬರಲಿದ್ದು, ಈಗಾಗಲೇ ಕೇಂದ್ರ ಗೃಹಸಚಿವಾಲಯ ಕೆಲವೊಂದು ಸೂಚನೆ ನೀಡಿದ್ದು, ಮತ್ತೆ ಕೆಲವು ನಿರ್ಧಾರಗಳನ್ನು ಕೈಗೊಳ್ಳುವುದನ್ನು ಆಯಾ ರಾಜ್ಯ ಸರ್ಕಾರಗಳಿಗೆ ವಹಿಸಿದೆ.


ಅದರಲ್ಲಿ ಪ್ರಮುಖವಾಗಿರುವುದು ಬಸ್ ಸಂಚಾರ ಬೇಕೇ ಬೇಡವೇ ಎಂಬುದು. ಇಂದು ಈ ವಿಚಾರವಾಗಿ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ರಾಜ್ಯ, ಅಂತರಾಜ್ಯ ಬಸ್ ಸಂಚಾರ ಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.

ಪಕ್ಕದ ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ನೋಡಿದರೆ ಅಂತರಾಜ್ಯ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಕಷ್ಟ. ಆದರೆ ರಾಜ್ಯದೊಳಗೇ ಬಸ್ ಸಂಚರಿಸಲು ಷರತ್ತುಬದ್ಧ ಒಪ್ಪಿಗೆ ನೀಡುವ ಸಾಧ‍್ಯತೆಯಿದೆ. ಇದರಿಂದ ಹಲವು ಕಾರ್ಮಿಕರಿಗೆ, ನೌಕರರಿಗೆ ತಮ್ಮ ಕೆಲಸಗಳಿಗೆ ಹೋಗಲು ಅನುಕೂಲವಾಗಲಿದೆ. ಹೀಗಾಗಿ ಸಿಎಂ ಇಂದು ಕೈಗೊಳ್ಳುವ ನಿರ್ಧಾರದ ಮೇಲೆ ಹಲವರ ಭವಿಷ್ಯ ಅಡಕವಾಗಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments