Webdunia - Bharat's app for daily news and videos

Install App

ಶೃಂಗಸಭೆಯ ಸಹ ಅಧ್ಯಕ್ಷತೆ ಹೆಮ್ಮೆ, ಗೌರವ ತಂದಿದೆ : ನರೇಂದ್ರ ಮೋದಿ

Webdunia
ಗುರುವಾರ, 7 ಸೆಪ್ಟಂಬರ್ 2023 (09:26 IST)
ಜಕಾರ್ತ : ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ಇಂಡೋನೇಷ್ಯಾಕ್ಕೆ ಆಗಮಿಸಿದ್ದು, ಆಯಕಟ್ಟಿನ ಪ್ರಮುಖ ಪ್ರದೇಶದ ದೇಶಗಳೊಂದಿಗೆ ಭಾರತದ ಪಾಲುದಾರಿಕೆಯ ಭವಿಷ್ಯದ ಬಾಹ್ಯರೇಖೆಯನ್ನು ಚರ್ಚಿಸಲಿದ್ದಾರೆ.

ಜಕಾರ್ತದಲ್ಲಿ ನಡೆದ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ವರ್ಷ ನಾವು ಭಾರತ-ಆಸಿಯಾನ್ ಸ್ನೇಹ ದಿನವನ್ನು ಆಚರಿಸಿದ್ದೇವೆ ಮತ್ತು ಅದಕ್ಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ರೂಪವನ್ನು ನೀಡಿದ್ದೇವೆ ಎಂದರು.

ನಮ್ಮ ಪಾಲುದಾರಿಕೆಯು ನಾಲ್ಕನೇ ದಶಕವನ್ನು ತಲುಪಿದೆ. ಈ ಶೃಂಗಸಭೆಯ ಸಹ ಅಧ್ಯಕ್ಷರಾಗಿರುವುದು ನನಗೆ ಹೆಮ್ಮೆ ತಂದಿದೆ. ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ಇಂಡೋನೇಷ್ಯಾದ ಅಧ್ಯಕ್ಷ ಜೋಕೋ ವಿಡೋಡೋ ಅವರನ್ನು ನಾನು ಅಭಿನಂದಿಸುತ್ತೇನೆ.

ಭಾರತ ಮತ್ತು ಆಸಿಯಾನ್ ಮಧ್ಯೆ ಉತ್ತಮ ಬಾಂಧವ್ಯವಿದೆ. ಶಿಕ್ಷಣ, ರಕ್ಷಣೆ ಮತ್ತು ಪ್ರವಾಸೋದ್ಯಮ ವಿಷಯಗಳಲ್ಲಿ ಪರಸ್ಪರ ಸಹಕಾರವನ್ನು ನೀಡಿದೆ. ಆಸಿಯಾನ್ ದೇಶದ ಅಭಿವೃದ್ಧಿಗೆ ಭಾರತ ಸಹಕರಿಸಲಿದೆ ಎಂದು ಹೇಳಿದರು.

ಇದಕ್ಕೂ ಮೊದಲು ಪ್ರಧಾನಿ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಜಕಾರ್ತದಲ್ಲಿ ಬಂದಿಳಿದಿದ್ದೇನೆ.

ಆಸಿಯಾನ್ ಸಂಬಂಧಿತ ಸಭೆಗಳನ್ನು ಎದುರು ನೋಡುತ್ತಿದ್ದೇನೆ. ವಿಶ್ವವನ್ನು ಉತ್ತಮವಾಗಿಸುವ ಸಲುವಾಗಿ ವಿವಿಧ ನಾಯಕರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬರೆದು ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೇ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಜಕಾರ್ತದಲ್ಲಿ ಪ್ರಧಾನಿ ಮೋದಿಯವರ ಫೋಟೋಗಳನ್ನು ತಮ್ಮ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments