Webdunia - Bharat's app for daily news and videos

Install App

ಕರಾವಳಿಗೆ ನಯಾಪೈಸೆ ಕೊಡದ ಸಿಎಂ ವಿರುದ್ಧ ಆಕ್ರೋಶ

Webdunia
ಶುಕ್ರವಾರ, 6 ಜುಲೈ 2018 (09:15 IST)
ಬೆಂಗಳೂರು: ಈ ಬಾರಿಯ ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಕರಾವಳಿ, ಮಲೆನಾಡಿಗೆ ತೀರಾ ನಿರಾಶೆಯಾಗಿದೆ. ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಬಹುಪಾಲು ಹಾಸನ, ರಾಮನಗರ, ಹಳೆ ಮೈಸೂರು ಭಾಗಗಳಿಗೆ ಸಿಕ್ಕಿರುವುದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ.
 

ಕರಾವಳಿಯಲ್ಲಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಹುತೇಕ ಬಿಜೆಪಿಯೇ ಗೆದ್ದಿತ್ತು. ಆ ಭಾಗಕ್ಕೆ ಯಾವುದೇ ಅನುದಾನ ಕೊಡದೇ ಸಿಎಂ ರಾಜ್ಯದ ಜನತೆಗೆ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ಬಜೆಟ್ ನಂತರ ಆಕ್ರೋಶ ವ್ಯಕ್ತಪಡಿಸಿದೆ.

ಇತ್ತ ಕರಾವಳಿ ಭಾಗದ ಜನತೆ ಸಾಮಾಜಿಕ ಜಾಲತಾಣಗಳ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಮಂಡ್ಯ, ಹಾಸನ, ರಾಮನಗರ ಬಜೆಟ್ ಎಂದು ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದ.ಕ. ಜಿಲ್ಲೆ ಜತೆಗೆ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ,  ಉತ್ತರ ಕರ್ನಾಟಕವನ್ನೂ ಬಜೆಟ್ ನಲ್ಲಿ ನಿರ್ಲಕ್ಷಿಸಿರುವುದು ಬಿಜೆಪಿ ಟೀಕೆಗೆ ಗುರಿಯಾಗಿದೆ. ರಾಜ್ಯದ ಇಡೀ ಹಣವನ್ನು ಕೇವಲ ತಮ್ಮನ್ನು ಗೆಲ್ಲಿಸಿದ ಮೂರು ಕ್ಷೇತ್ರಗಳಿಗೆ ಸಿಎಂ ಹಂಚಿರುವುದು ಅಕ್ಷಮ್ಯ ಎಂದು ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಕರಾವಳಿ ಜನರಿಗಾದ ಅನ್ಯಾಯದ ವಿರುದ್ಧ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಹೋರಾಟ ನಡೆಸುವುದಾಗಿಯೂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments