Webdunia - Bharat's app for daily news and videos

Install App

ಶಾಲೆ ನಡೆಸುವ ಬಗ್ಗೆ ತೀರ್ಮಾನ: ಬಿ ಸಿ ನಾಗೇಶ್

Webdunia
ಬುಧವಾರ, 12 ಜನವರಿ 2022 (16:10 IST)
ಬೆಂಗಳೂರು : ಕೊರೊನಾ ಪ್ರಕರಣಗಳ ವಾಸ್ತವವನ್ನು ನೋಡಿಕೊಂಡು ರಾಜ್ಯದಲ್ಲಿ ಶಾಲೆಗಳನ್ನು ನಡೆಸಲು ತೀರ್ಮಾನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿ ದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜತೆ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.

ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚಿದ ಕಾರಣ ಸಾಕಷ್ಟು ಸಮಸ್ಯೆ ಉಂಟಾಗಿದೆ. ಆದರೂ ಕಳೆದ 4 ತಿಂಗಳಿನಿಂದ ಸತತ ಪ್ರಯತ್ನ ನಡೆಸಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಶಾಲೆಗಳನ್ನು ನಡೆಸುವ ತೀರ್ಮಾನ ಇದೆ.

ಈ ತನಕ ಮಕ್ಕಳಿಗೆ ಪಾಸಿಟಿವ್ ತಗುಲಿಲ್ಲ. ಬೆಂಗಳೂರಿನಲ್ಲಿ ಜನವರಿ 19 ರ ನಂತರ 1 ರಿಂದ 9 ನೇ ತರಗತಿ ಮಕ್ಕಳಿಗೆ ರಜೆ ಮುಂದುವರೆಸುವ ತೀರ್ಮಾನ ಕೈಗೊಳ್ಳಲಾಗುತ್ತದೆ. ನಿನ್ನೆ ತನಕ 1 ಸಾವಿರ ಮಕ್ಕಳಿಗೆ ಕೋವಿಡ್ ಸೋಂಕು ತಗುಲಿದೆ. ಈಗಾಗಲೇ ರಾಜಧಾನಿಯಲ್ಲಿ ಅತಿ ಹೆಚ್ಚು ಮಕ್ಕಳಿಗೆ ಸೋಂಕು ತಗುಲಿದೆ.

ಬೆಳಗಾವಿ, ಮಂಗಳೂರಿನಲ್ಲೂ ಮಕ್ಕಳಿಗೆ ಕೋವಿಡ್ ತಗಲಿರುವುದು ತಿಳಿದು ಬಂದಿದೆ. ಹೀಗಾಗಿ ಬೆಂಗಳೂರಿನಲ್ಲಿ ರಜೆ ವಿಸ್ತರಣೆಯಾಗುವ ಸಾಧ್ಯತೆಯಿದೆ. ಇದನ್ನು ತಾಂತ್ರಿಕ ಸಲಹಾ ಸಮಿತಿ ನಿರ್ಧಾರವನ್ನು ಸರ್ಕಾರಕ್ಕೆ ತಿಳಿಸಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments