Webdunia - Bharat's app for daily news and videos

Install App

ಶಾಲೆ ನಡೆಸುವ ಬಗ್ಗೆ ತೀರ್ಮಾನ: ಬಿ ಸಿ ನಾಗೇಶ್

Webdunia
ಬುಧವಾರ, 12 ಜನವರಿ 2022 (16:10 IST)
ಬೆಂಗಳೂರು : ಕೊರೊನಾ ಪ್ರಕರಣಗಳ ವಾಸ್ತವವನ್ನು ನೋಡಿಕೊಂಡು ರಾಜ್ಯದಲ್ಲಿ ಶಾಲೆಗಳನ್ನು ನಡೆಸಲು ತೀರ್ಮಾನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿ ದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜತೆ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.

ಒಂದೂವರೆ ವರ್ಷದಿಂದ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚಿದ ಕಾರಣ ಸಾಕಷ್ಟು ಸಮಸ್ಯೆ ಉಂಟಾಗಿದೆ. ಆದರೂ ಕಳೆದ 4 ತಿಂಗಳಿನಿಂದ ಸತತ ಪ್ರಯತ್ನ ನಡೆಸಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಶಾಲೆಗಳನ್ನು ನಡೆಸುವ ತೀರ್ಮಾನ ಇದೆ.

ಈ ತನಕ ಮಕ್ಕಳಿಗೆ ಪಾಸಿಟಿವ್ ತಗುಲಿಲ್ಲ. ಬೆಂಗಳೂರಿನಲ್ಲಿ ಜನವರಿ 19 ರ ನಂತರ 1 ರಿಂದ 9 ನೇ ತರಗತಿ ಮಕ್ಕಳಿಗೆ ರಜೆ ಮುಂದುವರೆಸುವ ತೀರ್ಮಾನ ಕೈಗೊಳ್ಳಲಾಗುತ್ತದೆ. ನಿನ್ನೆ ತನಕ 1 ಸಾವಿರ ಮಕ್ಕಳಿಗೆ ಕೋವಿಡ್ ಸೋಂಕು ತಗುಲಿದೆ. ಈಗಾಗಲೇ ರಾಜಧಾನಿಯಲ್ಲಿ ಅತಿ ಹೆಚ್ಚು ಮಕ್ಕಳಿಗೆ ಸೋಂಕು ತಗುಲಿದೆ.

ಬೆಳಗಾವಿ, ಮಂಗಳೂರಿನಲ್ಲೂ ಮಕ್ಕಳಿಗೆ ಕೋವಿಡ್ ತಗಲಿರುವುದು ತಿಳಿದು ಬಂದಿದೆ. ಹೀಗಾಗಿ ಬೆಂಗಳೂರಿನಲ್ಲಿ ರಜೆ ವಿಸ್ತರಣೆಯಾಗುವ ಸಾಧ್ಯತೆಯಿದೆ. ಇದನ್ನು ತಾಂತ್ರಿಕ ಸಲಹಾ ಸಮಿತಿ ನಿರ್ಧಾರವನ್ನು ಸರ್ಕಾರಕ್ಕೆ ತಿಳಿಸಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments