ರಷ್ಯಾ ಪ್ರಜೆಗಳಿಂದಲೇ ಖಂಡನೆ?

Webdunia
ಭಾನುವಾರ, 27 ಫೆಬ್ರವರಿ 2022 (08:37 IST)
ನವದೆಹಲಿ : ಉಕ್ರೇನ್ನಲ್ಲಿ ರಷ್ಯಾ ರಕ್ತದೋಕುಳಿ ನಡೆಸುತ್ತಿದೆ. ರಷ್ಯಾ ಸೈನಿಕರ ರಾಕ್ಷಸೀ ಕೃತ್ಯಕ್ಕೆ 25ಕ್ಕೂ ಹೆಚ್ಚು ದೇಶಗಳು ಕೆಂಡಾಮಂಡಲವಾಗಿವೆ.

ವಿಶ್ವದೆಲ್ಲೆಡೆ ಜನ ಪ್ರತಿಭಟನೆ ನಡೆಸುತ್ತಿದ್ದಾರೆ. ವಿಪರ್ಯಾಸ ಅಂದ್ರೆ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ನಡೆಯನ್ನು ರಷ್ಯಾ ಪ್ರಜೆಗಳೇ ತೀವ್ರವಾಗಿ ಖಂಡಿಸಿದ್ದಾರೆ.

ನಮ್ಮದೇ ಸಂಸ್ಕೃತಿಯ, ನಮ್ಮದೇ ಭಾಷಿಕರ ದೇಶ ಉಕ್ರೇನ್ನಲ್ಲಿ ಯುದ್ಧ ನಿಲ್ಲಿಸಿ ಎಂದು ಸಾವಿರಾರು ರಷ್ಯನ್ನರು ವಿವಿಧೆಡೆ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯನ್ನು ಬಲವಂತವಾಗಿ ಹತ್ತಿಕ್ಕುವ ಕೆಲಸವನ್ನು ರಷ್ಯಾ ಸರ್ಕಾರ ಮಾಡುತ್ತಿದೆ. ಮಹಿಳೆಯರು ಎನ್ನುವುದನ್ನು ನೋಡದೇ ಕೂದಲಿಡಿದು ಕ್ರೌರ್ಯ ಮೆರೆದಿದೆ.

ಉಕ್ರೇನ್ ಸರ್ಕಾರದ ಮೇಲೆ ದಾಳಿಗೆ ಪುಟಿನ್ ಆದೇಶ ನೀಡಿದ್ದಾರೆ. ಶರಣಾಗಲು ಅಧ್ಯಕ್ಷರಿಗೆ ಕರೆ ನೀಡಿದ್ದಾರೆ. ಆದರೆ ಹೋರಾಟವನ್ನು ನಿಲ್ಲಿಸಿ ಶಸ್ತ್ರತ್ಯಾಗ ಮಾಡುವ ಪ್ರಶ್ನೆಯೇ ಇಲ್ಲ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಎಂತಹ ಪರಿಸ್ಥಿತಿ ಬಂದರೂ ಕೀವ್ ಬಿಟ್ಟುಕೊಡಲ್ಲ.

ನಮ್ಮ ಸೈನಿಕರು ವಿರೋಚಿತವಾಗಿ ಹೋರಾಡುತ್ತಿದ್ದಾರೆ. ನಮ್ಮವರು ರಷ್ಯಾದ ಸಾವಿರಾರು ಸೈನಿಕರನ್ನು ಕೊಂದಿದ್ದಾರೆ. ಈ ಹಂತದಲ್ಲಿ ನಮ್ಮವರನ್ನು ನಾವು ಕಳೆದಕೊಂಡಿದ್ದೇವೆ. ಆದರೆ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇವತ್ತೊಂದು ರಾತ್ರಿ ಧೈರ್ಯವಾಗಿರಿ ಎಂದು ಝೆಲೆನ್ಸ್ಕಿ ದೇಶದ ಜನೆತೆಗೆ ಕರೆ ನೀಡಿದ್ದಾರೆ.

ಈ ಮಧ್ಯೆ, ಉಕ್ರೇನ್ ನೆರವಿಗೆ ಪೊಲೆಂಡ್ ಧಾವಿಸುವ ಮುನ್ಸೂಚನೆ ನೀಡಿದೆ. ರಷ್ಯಾದ ಕ್ರಮವನ್ನು ಬಹಿರಂಗವಾಗಿ ಖಂಡಿಸಿದೆ. ವಿಶ್ವಸಂಸ್ಥೆ 150 ಕೋಟಿ ರೂಪಾಯಿ ನೆರವು ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಆರೆಸ್ಸೆಸ್ ಬೆದರಿಕೆ ಕರೆ ಎಂದು ತೋರಿಸಿದ ಪ್ರಿಯಾಂಕ್ ಖರ್ಗೆಗೆ ನಿಮ್ಮ ನಂಬರ್ ಸುಲಭಕ್ಕೆ ಸಿಗುತ್ತಾ ಎಂದು ಪ್ರಶ್ನಿಸಿದ ಪಬ್ಲಿಕ್

ಆರೆಸ್ಸೆಸ್ ನಿಷೇಧಿಸಲು ಕಾಂಗ್ರೆಸ್ ನಿಂದ ಸಾಧ್ಯವಿಲ್ಲ: ವಿಜಯೇಂದ್ರ

ಮುಂದಿನ ಸುದ್ದಿ
Show comments