ಮಾಯಾವತಿ ಕೈ ಕೊಟ್ಟ ಮೇಲೆ ಹೊಸ ಗೆಳೆಯನ ಮೇಲೆ ಕಾಂಗ್ರೆಸ್ ಕಣ್ಣು

Webdunia
ಶುಕ್ರವಾರ, 5 ಅಕ್ಟೋಬರ್ 2018 (08:33 IST)
ನವದೆಹಲಿ: ಮಹಾಘಟಬಂಧನ ಮಾಡಲು ಹೊರಟ ಕಾಂಗ್ರೆಸ್ ಗೆ ಮಾಯಾವತಿ ಕೈಕೊಟ್ಟ ಬೆನ್ನಲ್ಲೇ ಕಾಂಗ್ರೆಸ್ ಹೊಸ ಸಖ್ಯ ಮಾಡಲು ಹೊರಟಿದೆ.

ಉತ್ತರ ಪ್ರದೇಶದಲ್ಲಿ ಮಾಯಾವತಿಯಲ್ಲಿ ಕಳೆದುಕೊಂಡ ಗೆಳೆತನವನ್ನು ಇದೀಗ ಸಮಾಜವಾದಿ ಪಕ್ಷದ ಜತೆಗೆ ಕಂಡುಕೊಳ್ಳಲು ಮುಂದಾಗಿದೆ. ಹಿಂದೆ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಜತೆಗೆ ಗೆಳೆತನ ಮಾಡಿ ಕಾಂಗ್ರೆಸ್ ಕೈ ಸುಟ್ಟುಕೊಂಡಿತ್ತು.

ಇದಾದ ಬಳಿಕ ಎರಡೂ ಪಕ್ಷಗಳೂ ಬೇರ್ಪಟ್ಟಿದ್ದವು. ಇದೀಗ ಮತ್ತೆ ಲೋಕಸಭೆ ಚುನಾವಣೆಗೆ ಬಿಜೆಪಿ ಸೋಲಿಸಲು ಕಾಂಗ್ರೆಸ್ ಜತೆ ಸೇರಲು ಸಿದ್ಧ ಎಂದು ಅಖಿಲೇಶ್ ಯಾದವ್ ಬಹಿರಂಗವಾಗಿ ಹೇಳಿರುವುದರಿಂದ ಕಾಂಗ್ರೆಸ್ ಗೂ ಮತ್ತೆ ಎಸ್ ಪಿ ಜತೆ ಸಖ್ಯ ಬೆಳೆಸುವ ಉತ್ಸಾಹ ಬಂದಿದೆ. ಉತ್ತರ ಪ್ರದೇಶದಲ್ಲಿ ಪ್ರಮುಖ ಪಕ್ಷವೊಂದರ ಬಲ ಕಾಂಗ್ರೆಸ್ ಗೆ ಬೇಕಾಗಿದೆ. ಅದನ್ನೀಗ ಎಸ್ ಪಿ ಮೂಲಕ ಕಂಡುಕೊಳ್ಳಲು ಮುಂದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments