Webdunia - Bharat's app for daily news and videos

Install App

ಸ್ಪೀಕರ್ ಸ್ಥಾನಕ್ಕಾಗಿ ಕಾಂಗ್ರೆಸ್-ಜೆಡಿಎಸ್ ಫೈಟ್

Webdunia
ಬುಧವಾರ, 4 ಜುಲೈ 2018 (09:26 IST)
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕಾಗಿ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ತೆರೆಮರೆಯ ಕಸರತ್ತು ನಡೆಸುತ್ತಿವೆ.

ಸದ್ಯಕ್ಕೆ ಹಂಗಾಮಿ ಸ್ಪೀಕರ್ ಆಗಿರುವ ಜೆಡಿಎಸ್ ನ ಬಸವರಾಜ ಹೊರಟ್ಟಿಯವರನ್ನೇ ಖಾಯಂ ಸ್ಪೀಕರ್ ಆಗಿ ಮುಂದುವರಿಸಲು ಜೆಡಿಎಸ್ ಪ್ರಯತ್ನ ನಡೆಸಿದೆ. ಇದಕ್ಕಾಗಿ ಮಿತ್ರ ಪಕ್ಷ ಕಾಂಗ್ರೆಸ್ ಜತೆ ಚೌಕಾಶಿ ನಡೆಸುತ್ತಿದೆ.

ಸಮನ್ವಯ ಸಮಿತಿ ಸದಸ್ಯರಾಗಿರುವ ಜೆಡಿಎಸ್ ಕಾರ್ಯದರ್ಶಿ ಡ್ಯಾನಿಶ್‍ ಅಲಿ ಇಂದು ಈ ಕುರಿತಾಗಿ ಸಿದ್ದರಾಮಯ್ಯ, ಡಾ ಜಿ ಪರಮೇಶ್ವರ್ ಮತ್ತು ಕೆಸಿ ವೇಣುಗೋಪಾಲ್ ಜತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಆ ಮೂಲಕ ಸ್ಪೀಕರ್ ಸ್ಥಾನವನ್ನು ತಮ್ಮ ಪಕ್ಷದಲ್ಲೇ ಉಳಿಸಿಕೊಳ್ಳಲು ಲಾಬಿ ನಡೆಸಲಿದ್ದಾರೆ. ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ರಮೇಶ್ ಕುಮಾರ್ ಇರುವುದರಿಂದ ಪರಿಷತ್ ಸಭಾಪತಿ ಸ್ಥಾನ ತನಗೇ ಸಿಗಬೇಕೆಂಬುದು ಜೆಡಿಎಸ್ ಪಟ್ಟು. ಅತ್ತ ಕಾಂಗ್ರೆಸ್ ಹಠ ಬಿಡುತ್ತಿಲ್ಲ, ಇತ್ತ ಜೆಡಿಎಸ್ ಪಟ್ಟು ಬಿಡುತ್ತಿಲ್ಲ ಎನ್ನುವಂತಾಗಿದೆ. ಇದಕ್ಕೆಲ್ಲಾ ಇಂದು ಸಂಜೆ ಉತ್ತರ ಸಿಗುವ ನಿರೀಕ್ಷೆಯಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments