Publish Date: Sat, 02 Jun 2018 (12:05 IST)
Updated Date: Sat, 02 Jun 2018 (12:07 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ನಿರ್ಮಿಸಿದ ಖುಷಿಯಲ್ಲಿರುವ ಜೆಡಿಎಸ್-ಕಾಂಗ್ರೆಸ್ ಮುಂಬರುವ ಲೋಕಸಭೆ ಚುನಾವಣೆಗೂ ಮೈತ್ರಿ ಮುಂದುವರಿಸಲು ನಿರ್ಧರಿಸಿವೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆಗೆ ಮೊದಲು ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ‘ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಇದೇ ಮೈತ್ರಿ ಮುಂದುವರಿಸುತ್ತೇವೆ’ ಎಂದಿದ್ದಾರೆ.
ಆದರೆ ಯಾವ ಪಕ್ಷಕ್ಕೆ ಎಷ್ಟು ಸೀಟು ಎನ್ನುವುದರ ಕುರಿತು ಇನ್ನೂ ಚರ್ಚೆಯಾಗಿಲ್ಲ. ಸಿಎಂ ಎಚ್ ಡಿಕೆ ಜತೆ ನಾನು ಚರ್ಚಿಸಿ ಸೀಟು ಹಂಚಿಕೆ ಕುರಿತು ನಿರ್ಧಾರ ಮಾಡುವುದಾಗಿ ಪರಮೇಶ್ವರ್ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.